<p>ಹುಲಸೂರ: ‘ಬಸವ ಸಂಸ್ಕೃತಿ ಅಭಿಯಾನ ಹಾಗೂ ಬಸವ ತತ್ವದ ಸ್ವಾಮೀಜಿಗಳ ಕುರಿತ ಕನ್ಹೇರಿಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡನೀಯ’ ಎಂದು ಹುಲಸೂರಿನ ಶಿವಾನಂದ ಸ್ವಾಮೀಜಿ ಹೇಳಿದರು.</p>.<p>ಪತ್ರಿಕೆಯ ಜೊತೆ ಮಾತನಾಡಿದ ಅವರು,‘ಸಿದ್ದೇಶ್ವರ ಸ್ವಾಮಿಜಿ ಅವರ ಶಿಷ್ಯರಾಗಿ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಲಾರದೆ ಅತ್ಯಂತ ಕೀಳುಮಟ್ಟದ ಗುಣಗಳನ್ನು ಅಳವಡಿಸಿಕೊಂಡು ಭ್ರಾಂತಿಯಿಂದ ಮನಸ್ಸಿಗೆ ಬಂದಂತೆ ಮಾತನಾಡುವ ಅವರು ನಿಜವಾದ ಸ್ವಾಮೀಜಿಯಲ್ಲ. ಅವರ ಹೇಳಿಕೆ ಅವಿವೇಕದ ಪರಮಾವಧಿ’ ಎಂದರು.</p>.<p>‘ಬುದ್ಧಿಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲಾರದೆ ಎಲುಬಿಲ್ಲದ ನಾಲಿಗೆಯಿಂದ ಲಿಂಗಾಯತ ಮಠಗಳ ಒಕ್ಕೂಟದ ಸ್ವಾಮೀಜಿಗ ಳನ್ನು ನಿಂದಿಸಿದ್ದಾರೆ. ವಿವೇಕದಿಂದ ಮಾತನಾಡಬೇಕು. ಕೆಟ್ಟ ಮಾತುಗಳನ್ನು ಹಾಡುವ ಮೂಲಕ ಸಣ್ಣತನ ಪ್ರದರ್ಶಿಸಬಾರದು’ ಎಂದು ಹೇಳಿದರು. </p>.<p>‘ನಮ್ಮನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೃಪಾಪೋಷಿತ ನಾಟಕ ಸಂಘದವರು ಎಂದು ಆ ಸ್ವಾಮೀಜಿ ಕರೆದಿದ್ದಾನೆ. ನಾವು ಯಾವ ಕೃಪಾಪೋಷಿತ ನಾಟಕ ಸಂಘದವರೂ ಅಲ್ಲ. ಆ ಸ್ವಾಮೀಜಿಗೆ ಕಾಮಾಲೆಯಾಗಿದೆ. ತಲೆಯಲ್ಲಿ ವಿಚಾರಗಳಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಾವು ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಮಂದಿರಗಳಿಗೆ ಹೋಗಬೇಡಿ ಎಂದು ಯಾರಿಗೂ ಹೇಳಿಲ್ಲ. ಅವರು ತಮ್ಮ ಎಲುಬಿಲ್ಲದ ನಾಲಗೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸುವುದು ಹೇಗೆ ಎಂದು ಲಿಂಗಾಯತ ಮಠಾಧೀಶರಿಗೆ ಗೊತ್ತು’ ಎಂದು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಲಸೂರ: ‘ಬಸವ ಸಂಸ್ಕೃತಿ ಅಭಿಯಾನ ಹಾಗೂ ಬಸವ ತತ್ವದ ಸ್ವಾಮೀಜಿಗಳ ಕುರಿತ ಕನ್ಹೇರಿಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿಕೆ ಖಂಡನೀಯ’ ಎಂದು ಹುಲಸೂರಿನ ಶಿವಾನಂದ ಸ್ವಾಮೀಜಿ ಹೇಳಿದರು.</p>.<p>ಪತ್ರಿಕೆಯ ಜೊತೆ ಮಾತನಾಡಿದ ಅವರು,‘ಸಿದ್ದೇಶ್ವರ ಸ್ವಾಮಿಜಿ ಅವರ ಶಿಷ್ಯರಾಗಿ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಲಾರದೆ ಅತ್ಯಂತ ಕೀಳುಮಟ್ಟದ ಗುಣಗಳನ್ನು ಅಳವಡಿಸಿಕೊಂಡು ಭ್ರಾಂತಿಯಿಂದ ಮನಸ್ಸಿಗೆ ಬಂದಂತೆ ಮಾತನಾಡುವ ಅವರು ನಿಜವಾದ ಸ್ವಾಮೀಜಿಯಲ್ಲ. ಅವರ ಹೇಳಿಕೆ ಅವಿವೇಕದ ಪರಮಾವಧಿ’ ಎಂದರು.</p>.<p>‘ಬುದ್ಧಿಯನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲಾರದೆ ಎಲುಬಿಲ್ಲದ ನಾಲಿಗೆಯಿಂದ ಲಿಂಗಾಯತ ಮಠಗಳ ಒಕ್ಕೂಟದ ಸ್ವಾಮೀಜಿಗ ಳನ್ನು ನಿಂದಿಸಿದ್ದಾರೆ. ವಿವೇಕದಿಂದ ಮಾತನಾಡಬೇಕು. ಕೆಟ್ಟ ಮಾತುಗಳನ್ನು ಹಾಡುವ ಮೂಲಕ ಸಣ್ಣತನ ಪ್ರದರ್ಶಿಸಬಾರದು’ ಎಂದು ಹೇಳಿದರು. </p>.<p>‘ನಮ್ಮನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೃಪಾಪೋಷಿತ ನಾಟಕ ಸಂಘದವರು ಎಂದು ಆ ಸ್ವಾಮೀಜಿ ಕರೆದಿದ್ದಾನೆ. ನಾವು ಯಾವ ಕೃಪಾಪೋಷಿತ ನಾಟಕ ಸಂಘದವರೂ ಅಲ್ಲ. ಆ ಸ್ವಾಮೀಜಿಗೆ ಕಾಮಾಲೆಯಾಗಿದೆ. ತಲೆಯಲ್ಲಿ ವಿಚಾರಗಳಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಾವು ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಮಂದಿರಗಳಿಗೆ ಹೋಗಬೇಡಿ ಎಂದು ಯಾರಿಗೂ ಹೇಳಿಲ್ಲ. ಅವರು ತಮ್ಮ ಎಲುಬಿಲ್ಲದ ನಾಲಗೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸುವುದು ಹೇಗೆ ಎಂದು ಲಿಂಗಾಯತ ಮಠಾಧೀಶರಿಗೆ ಗೊತ್ತು’ ಎಂದು ವಾಗ್ದಾಳಿ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>