ಸುಳ್ಳಿನ ಸರ್ದಾರ, ಶಾಸಕ ಖಂಡ್ರೆ ವಿಧಾನಸಭೆಯಲ್ಲಿ 3 ಲಕ್ಷ ಮತ ಪಡೆದಿದ್ದೇನೆ ಎಂದು ಹೇಳಿರುವುದು ಹಾಸ್ಯಾಸ್ಪದ. ಪಟ್ಟಣದ ವ್ಯಾಪಾರಿಗಳ ಮೇಲೆ ದಬ್ಬಾಳಿಕೆ ನಡೆಸಲು ಹೊರಟಿರುವುದನ್ನು ಸಹಿಸುವುದಿಲ್ಲ ಎಂದು ತಿಳಿಸಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಮಂಠಾಳಕರ್, ಎನ್ಎಸ್ಎಸ್ಕೆ ಅಧ್ಯಕ್ಷ ಡಿ.ಕೆ.ಸಿದ್ರಾಮ, ಪ್ರಧಾನ ಕಾರ್ಯದರ್ಶಿ ಅರಿಹಂತ ಸಾವಳೆ, ಪ್ರಸನ್ನ ಖಂಡ್ರೆ, ಜನಾರ್ಧನರಾವ್ ಬಿರಾದಾ ರ ಮಾ ತನಾಡಿ,‘ಶಾಸಕ ಖಂಡ್ರೆ ಅವರ ದುರಂಹಕಾರದ ವರ್ತನೆ ಹೆಚ್ಚು ದಿನ ನಡೆಯುವುದಿಲ್ಲ. ಮತದಾರರು ಮುಂ ಬರುವ ಚುನಾವಣೆಯಲ್ಲಿ ಅವರನ್ನು ಸೋಲಿಸುವ ಮೂಲಕ ತಕ್ಕಪಾಠ ಕಲಿಸಬೇಕು’ ಎಂದು ಹೇಳಿದರು.