ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಅಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ 18 ಸ್ಥಳೀಯ ಕಲಾವಿದರು, 13 ಅನ್ಯ ಜಿಲ್ಲೆಗಳ ಕಲಾವಿದರು ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ವಚನ ಗಾಯನ, ಜನಪದ ಗಾಯನ, ತತ್ವಪದ, ದೇಶಭಕ್ತಿ ಗೀತೆಗಳು, ತಾಳವಾದ್ಯ ಕಾರ್ಯಕ್ರಮ ನಡೆಸಿಕೊಡುವರು. ಸಾಹಿತ್ಯ ಗೋಷ್ಠಿ, ವಿಚಾರ ಸಂಕಿರಣಗಳು ನಡೆಯಲಿವೆ’ ಎಂದು ವಿವರಿಸಿದರು.