<p><strong>ಹುಮನಾಬಾದ್:</strong> ತಾಲ್ಲೂಕಿನ ಹಳ್ಳಿಖೇಡ (ಬಿ) ಪಟ್ಟಣದ ಹೊರವಲಯದಲ್ಲಿ ಐತಿಹಾಸಿಕ ಸೀಮಿನಾಗನಾಥೇಶ್ವರ ರಥೋತ್ಸವವು ಭಾನುವಾರ ಬೆಳಗಿನ ಜಾವ ವೈಭವದಿಂದ ನಡೆಯಿತು.</p>.<p>ಜಾತ್ರಾ ಮಹೋತ್ಸವ ಪ್ರಯುಕ್ತ ಅಭಿಷೇಕ್, ಬಿಲ್ವಾರ್ಚನೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಭಾನುವಾರ ಬೆಳಿಗ್ಗೆ ಹಳ್ಳಿಖೇಡ (ಬಿ) ಪಟ್ಟಣದ ಚಿಕ್ಕಮಠ ಸಂಸ್ಥಾನದ ಪಂಡಿತಾರಾಧ್ಯ ಶಿವಾಚಾರ್ಯರ ನೇತೃತ್ವದಲ್ಲಿ ಸಹಸ್ರಾರು ಸದ್ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿತು.</p>.<p>ಮೈಕೋರೆಯುವ ಛಳಿ ಲೆಕ್ಕಿಸದೆ ಹಾಜರಿದ್ದ ಸಾವಿರಾರು ಭಕ್ತರು ದೇವರಿಗೆ ಕಾಯಿ ಕರ್ಪೂರ ಅರ್ಪಿಸಿ ದರ್ಶನ ಪಡೆದು ಪುನೀತರಾದರು.</p>.<p><span class="bold"><strong>ಸಂಭ್ರದ ಪಲ್ಲಕ್ಕಿ ಉತ್ಸವ: </strong></span>ಶನಿವಾರ ರಾತ್ರಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮಾರಾವ್ ಪಾಟೀಲ ಅವರು ಸೀಮಿನಾಗನಾಥೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹೆಗಲು ನೀಡಿ ಚಾಲನೆ ನೀಡಿದರು.</p>.<p>ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ವಾದ್ಯಗಳ ನಡುವೆ ದೇವಸ್ಥಾನದ ಪಲ್ಲಕ್ಕಿ ಉತ್ಸವ ವೈಭವದಿಂದ ನಡೆಯಿತು.</p>.<p>ದೇವಸ್ಥಾನದಲ್ಲಿ ಶನಿವಾರ ತಡರಾತ್ರಿಯಿಂದ ಭಾನುವಾರ ಬೆಳಿಗಿನ ಜಾವದವರೆಗೆ ಭಕ್ತಸಾಗರ ಹರಿದು ಬಂದಿದೆ. ಬೀದರ್, ಕಲಬುರಗಿ ಮಾತ್ರ ಅಲ್ಲದೇ ಪಕ್ಕದ ತೆಲಂಗಾಣದ ಜಹಿರಾಬಾದ್, ಹೈದರಾಬಾದ್, ಮಹಾರಾಷ್ಟ್ರ ಸೋಲಾಪುರ, ಪುಣೆ, ಲಾತೂರ್ ಮೊದಲಾದ ಕಡೆಗಳಿಂದ ಅಪಾರ ಸಂಖ್ಯೆಯ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದ್ದರು.</p>.<p>ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ್ ಪಾಟೀಲ, ಸಂತೋಷ್ ಪಾಟೀಲ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾಗೇಶ್ ಪ್ರಭಾ, ಸಿಪಿಐ ಗುರು ಪಾಟೀಲ, ಪಿಎಸ್ಐ ವಿಜಯಕುಮಾರ್, ಸೇರಿ ಪಟ್ಟಣದ ಪ್ರಮುಖರು ಸೇರಿ ವಿವಿಧ ಗಣ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್:</strong> ತಾಲ್ಲೂಕಿನ ಹಳ್ಳಿಖೇಡ (ಬಿ) ಪಟ್ಟಣದ ಹೊರವಲಯದಲ್ಲಿ ಐತಿಹಾಸಿಕ ಸೀಮಿನಾಗನಾಥೇಶ್ವರ ರಥೋತ್ಸವವು ಭಾನುವಾರ ಬೆಳಗಿನ ಜಾವ ವೈಭವದಿಂದ ನಡೆಯಿತು.</p>.<p>ಜಾತ್ರಾ ಮಹೋತ್ಸವ ಪ್ರಯುಕ್ತ ಅಭಿಷೇಕ್, ಬಿಲ್ವಾರ್ಚನೆ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಭಾನುವಾರ ಬೆಳಿಗ್ಗೆ ಹಳ್ಳಿಖೇಡ (ಬಿ) ಪಟ್ಟಣದ ಚಿಕ್ಕಮಠ ಸಂಸ್ಥಾನದ ಪಂಡಿತಾರಾಧ್ಯ ಶಿವಾಚಾರ್ಯರ ನೇತೃತ್ವದಲ್ಲಿ ಸಹಸ್ರಾರು ಸದ್ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿತು.</p>.<p>ಮೈಕೋರೆಯುವ ಛಳಿ ಲೆಕ್ಕಿಸದೆ ಹಾಜರಿದ್ದ ಸಾವಿರಾರು ಭಕ್ತರು ದೇವರಿಗೆ ಕಾಯಿ ಕರ್ಪೂರ ಅರ್ಪಿಸಿ ದರ್ಶನ ಪಡೆದು ಪುನೀತರಾದರು.</p>.<p><span class="bold"><strong>ಸಂಭ್ರದ ಪಲ್ಲಕ್ಕಿ ಉತ್ಸವ: </strong></span>ಶನಿವಾರ ರಾತ್ರಿ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮಾರಾವ್ ಪಾಟೀಲ ಅವರು ಸೀಮಿನಾಗನಾಥೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಹೆಗಲು ನೀಡಿ ಚಾಲನೆ ನೀಡಿದರು.</p>.<p>ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ವಾದ್ಯಗಳ ನಡುವೆ ದೇವಸ್ಥಾನದ ಪಲ್ಲಕ್ಕಿ ಉತ್ಸವ ವೈಭವದಿಂದ ನಡೆಯಿತು.</p>.<p>ದೇವಸ್ಥಾನದಲ್ಲಿ ಶನಿವಾರ ತಡರಾತ್ರಿಯಿಂದ ಭಾನುವಾರ ಬೆಳಿಗಿನ ಜಾವದವರೆಗೆ ಭಕ್ತಸಾಗರ ಹರಿದು ಬಂದಿದೆ. ಬೀದರ್, ಕಲಬುರಗಿ ಮಾತ್ರ ಅಲ್ಲದೇ ಪಕ್ಕದ ತೆಲಂಗಾಣದ ಜಹಿರಾಬಾದ್, ಹೈದರಾಬಾದ್, ಮಹಾರಾಷ್ಟ್ರ ಸೋಲಾಪುರ, ಪುಣೆ, ಲಾತೂರ್ ಮೊದಲಾದ ಕಡೆಗಳಿಂದ ಅಪಾರ ಸಂಖ್ಯೆಯ ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದ್ದರು.</p>.<p>ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಅಭಿಷೇಕ್ ಪಾಟೀಲ, ಸಂತೋಷ್ ಪಾಟೀಲ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾಗೇಶ್ ಪ್ರಭಾ, ಸಿಪಿಐ ಗುರು ಪಾಟೀಲ, ಪಿಎಸ್ಐ ವಿಜಯಕುಮಾರ್, ಸೇರಿ ಪಟ್ಟಣದ ಪ್ರಮುಖರು ಸೇರಿ ವಿವಿಧ ಗಣ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>