<p><strong>ಬೀದರ್</strong>: ಪ್ರಸಕ್ತ ಸಾಲಿನ ಕಲಬುರಗಿ ವಿಭಾಗಮಟ್ಟದ 14/17 ವಯೋಮಿತಿ ಒಳಗಿನ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಟೂರ್ನಿಯಲ್ಲಿ ಕೊಪ್ಪಳ ಜಿಲ್ಲೆ ಪಾರಮ್ಯ ಮೆರೆದಿದೆ.</p>.<p>ಬಾಲಕ ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ಉತ್ತಮ ಸಾಧನೆ ತೋರಿದ ಕೊಪ್ಪಳದ ತಂಡ ಅಂತಿಮ ಹಣಾಹಣಿಯಲ್ಲಿ ಗೆಲುವಿನ ನಗೆ ಬೀರಿದೆ. </p>.<p>ಕೊಪ್ಪಳದ ಬಾಲಕಿಯರ ತಂಡವು ಫೈನಲ್ನಲ್ಲಿ ರಾಯಚೂರು ಜಿಲ್ಲಾ ತಂಡವನ್ನು ಮಣಿಸಿದರೆ, ಬಾಲಕರ ವಿಭಾಗದಲ್ಲಿ ಕೊಪ್ಪಳವು ವಿಜಯನಗರ ಜಿಲ್ಲೆಯನ್ನು ಸೋಲಿಸಿ ಗೆಲುವಿಗೆ ಮುತ್ತಿಕ್ಕಿತು.</p>.<p>ನಗರದ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಟೂರ್ನಿಯಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ತಂಡಗಳು ಪಾಲ್ಗೊಂಡಿದ್ದವು. ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆ, ಸಾಮರ್ಥ್ಯ ಒರೆಗೆ ಹಚ್ಚಿದರು. ಮೋಡ ಮುಸುಕಿದ ವಾತಾವರಣದಲ್ಲಿ ಕ್ರೀಡಾಪಟುಗಳು ಪಂದ್ಯದಲ್ಲಿ ಜಯ ಗಳಿಸಲು ತೀವ್ರ ಕಸರತ್ತು ನಡೆಸಿದರು.</p>.<p>ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಟೂರ್ನಿ ಉದ್ಘಾಟಿಸಿ ಮಾತನಾಡಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಟೂರ್ನಿ ಏರ್ಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಪ್ರಸಕ್ತ ಸಾಲಿನ ಕಲಬುರಗಿ ವಿಭಾಗಮಟ್ಟದ 14/17 ವಯೋಮಿತಿ ಒಳಗಿನ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಟೂರ್ನಿಯಲ್ಲಿ ಕೊಪ್ಪಳ ಜಿಲ್ಲೆ ಪಾರಮ್ಯ ಮೆರೆದಿದೆ.</p>.<p>ಬಾಲಕ ಮತ್ತು ಬಾಲಕಿಯರ ಎರಡೂ ವಿಭಾಗಗಳಲ್ಲಿ ಉತ್ತಮ ಸಾಧನೆ ತೋರಿದ ಕೊಪ್ಪಳದ ತಂಡ ಅಂತಿಮ ಹಣಾಹಣಿಯಲ್ಲಿ ಗೆಲುವಿನ ನಗೆ ಬೀರಿದೆ. </p>.<p>ಕೊಪ್ಪಳದ ಬಾಲಕಿಯರ ತಂಡವು ಫೈನಲ್ನಲ್ಲಿ ರಾಯಚೂರು ಜಿಲ್ಲಾ ತಂಡವನ್ನು ಮಣಿಸಿದರೆ, ಬಾಲಕರ ವಿಭಾಗದಲ್ಲಿ ಕೊಪ್ಪಳವು ವಿಜಯನಗರ ಜಿಲ್ಲೆಯನ್ನು ಸೋಲಿಸಿ ಗೆಲುವಿಗೆ ಮುತ್ತಿಕ್ಕಿತು.</p>.<p>ನಗರದ ನೆಹರೂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಟೂರ್ನಿಯಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ತಂಡಗಳು ಪಾಲ್ಗೊಂಡಿದ್ದವು. ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆ, ಸಾಮರ್ಥ್ಯ ಒರೆಗೆ ಹಚ್ಚಿದರು. ಮೋಡ ಮುಸುಕಿದ ವಾತಾವರಣದಲ್ಲಿ ಕ್ರೀಡಾಪಟುಗಳು ಪಂದ್ಯದಲ್ಲಿ ಜಯ ಗಳಿಸಲು ತೀವ್ರ ಕಸರತ್ತು ನಡೆಸಿದರು.</p>.<p>ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಟೂರ್ನಿ ಉದ್ಘಾಟಿಸಿ ಮಾತನಾಡಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಟೂರ್ನಿ ಏರ್ಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>