ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ಕಲ್ಯಾಣ ಕರ್ನಾಟಕ ಉತ್ಸವ

Last Updated 17 ಸೆಪ್ಟೆಂಬರ್ 2022, 12:29 IST
ಅಕ್ಷರ ಗಾತ್ರ

ಕರಕನಳ್ಳಿ: ತಾಲ್ಲೂಕಿನ ಕರಕನಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರು ವಿಠಲರೆಡ್ಡಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌, ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಗ್ರಾಮ ಪಂಚಾಯಿತಿ ಸದಸ್ಯರಾದ ರಾಜು ನೆಲವಾಳ್‌, ಗುಂಡಮ್ಮ, ಸಿಬ್ಬಂದಿ ಅಂಬಾಜಿ, ಭಾಗ್ಯವತಿ, ವಿಜಯಕುಮಾರ್‌, ಭಾಗ್ಯಶ್ರೀ, ನಿರ್ಮಲಾ, ಸರೋಜಾ, ಮೀನಾಕ್ಷಿ, ರುಕ್ಮಿಣಿ, ಗೀತಾಂಜಲಿ, ಶಕುಂತಲಾ, ಏಸ್ತರಾಣಿ ಹಾಗೂ ರಮೇಶ ಇದ್ದರು.

ಮಂಗಲಗಿ: ತಾಲ್ಲೂಕಿನ ಮಂಗಲಗಿ ಗ್ರಾಮದ ನಂದಿನಿ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಗುರು ಸುವರ್ಣಾ ಚೀನಕೇರಾ ಅವರು ಸರ್ದಾರ್‌ ವಲ್ಲಭಭಾಯಿ ಪಟೇಲ್‌, ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಬೆಳಕೇರಾ: ತಾಲ್ಲೂಕಿನ ಬೆಳಕೇರಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಗುರು ಬಾಭು ಅಂಬಲೆ ಸರ್ದಾರ್‌ ವಲ್ಲಭಭಾಯಿ ಪಟೇಲ್‌, ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಷ್ಟ್ ರಧ್ವಜಾರೋಹಣ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT