<p><strong>ಕಮಲನಗರ:</strong> ಕಮಲನಗರ-ಔರಾದ್ ಮುಖ್ಯ ರಸ್ತೆಯಲ್ಲಿರುವ ಖತಗಾಂವ ಕ್ರಾಸ್ ಬಳಿಯ ಹಳ್ಳದ ಸೇತುವೆಗೆ ತಡೆಗೋಡೆಯೇ ಇಲ್ಲ. ಇದರಿಂದ ವಾಹನ ಸವಾರರು ನಿತ್ಯ ಜೀವ ಭಯದಲ್ಲೇ ಸಂಚರಿಸುವಂತಾಗಿದೆ.</p>.<p>ಕಮಲನಗರ ತಾಲ್ಲೂಕು ಕೇಂದ್ರದ ಕಚೇರಿ, ಶಾಲಾ-ಕಾಲೇಜು ಸೇರಿ ಇನ್ನಿತರ ಕೆಲಸ ಕಾರ್ಯಗಳಿಗೆ ಈ ಭಾಗದ ಜನರು ನಿತ್ಯ ಇದೇ ಮಾರ್ಗವಾಗಿ ಹೋಗುತ್ತಾರೆ. ಅಪಾಯ ಸಂಭವಿಸಿದರೆ ಯಾರು ಹೊಣೆ? ತಡೆಗೋಡೆ ನಿರ್ಮಿಸಲು ಅಧಿಕಾರಿಗಳು ಯಾಕೆ ಆಸಕ್ತಿ ತೋರುತ್ತಿಲ್ಲ ಎಂಬುದು ಸವಾರರ ಪ್ರಶ್ನೆ.</p>.<p>ಸೇತುವೆ ಇಳಿಜಾರು ರಸ್ತೆಯಲ್ಲಿ ಇರುವ ಕಾರಣ ವೇಗವಾಗಿ ಬರುವ ವಾಹನಗಳು ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಬೀಳುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ದ್ವಿಚಕ್ರ ವಾಹನ ಸವಾರರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಕೂಡ ಅಪಘಾತಕ್ಕೀಡಾದ ಉದಾಹರಣೆಗಳಿವೆ.</p>.<p>ಕೂಡಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸೇತುವೆಗೆ ತಡೆಗೋಡೆ ನಿರ್ಮಿಸಬೇಕು. ಸೇತುವೆ ಎತ್ತರ ಹೆಚ್ಚಿಸಬೇಕು ಎಂದು ಪ್ರಯಾಣಿಕರಾದ ಜಗನ್ನಾಥ ಪರಿಹಾರ, ಸಂಗಮೇಶ ಧರಣೆ, ಮಹೇಶ ಪಾಟೀಲ್, ದಿಗಂಬರ ಬಿರಾದಾರ, ಶೈಲೇಶ ಪೇನೆ, ಸಂಗಮೇಶ ವಲ್ಲೂರೆ ಒತ್ತಾಯಿಸಿದ್ದಾರೆ.</p>.<div><blockquote>ಕಮಲನಗರ ತಾಲ್ಲೂಕು ಕೇಂದ್ರಕ್ಕೆ ನಿತ್ಯ ನೂರಾರು ಜನ ಇದೇ ಮಾರ್ಗದಲ್ಲಿ ಸಂಚರಿಸುತ್ತಾರೆ. ಕೂಡಲೇ ಅಧಿಕಾರಿಗಳು ಗಮನಹರಿಸಿ ಸೇತುವೆಗೆ ತಡೆಗೋಡೆ ನಿರ್ಮಿಸಬೇಕು </blockquote><span class="attribution">ಮಂಜುನಾಥ ಸ್ವಾಮಿ ಕರವೇ ಅಧ್ಯಕ್ಷ ಕಮಲನಗರ</span></div>.<div><blockquote>ಇದು ಕಿರು ಸೇತುವೆ. ಈ ಸೇತುವೆಯ ಎತ್ತರ ಹೆಚ್ಚಿಸಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು</blockquote><span class="attribution"> ಶ್ರೀರಂಗ ಪರಿಹಾರ ತಾ.ಪಂ. ಮಾಜಿ ಅಧ್ಯಕ್ಷ</span></div>.<p><strong>ಸಂಪರ್ಕ ಕಡಿತ ಸಮಸ್ಯೆ:</strong></p><p> ಸೇತುವೆ ಇಳಿಜಾರಿನಲ್ಲಿದ್ದು ಮಳೆಗಾಲದಲ್ಲಿ ಸ್ವಲ್ಪ ಮಳೆ ಬಿದ್ದರೂ ಸೇತುವೆ ಮೇಲಿಂದ ನೀರು ಹರಿದು ಕಮಲನಗರ-ಔರಾದ್(ಬಾ) ಮುಖ್ಯರಸ್ತೆ ಸಂಪರ್ಕ ಕಡಿತಗೊಳ್ಳುತ್ತದೆ. ಇದರಿಂದ ದಾಬಕಾ ಡೋಣಗಾಂವ ತೋರಣಾ ಮುಧೋಳ ಮುರ್ಕಿ ಹಾಗೂ ಇನ್ನಿತರ ಗ್ರಾಮಗಳ ಸಾರ್ವಜನಿಕರು ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ಕಮಲನಗರ-ಔರಾದ್ ಮುಖ್ಯ ರಸ್ತೆಯಲ್ಲಿರುವ ಖತಗಾಂವ ಕ್ರಾಸ್ ಬಳಿಯ ಹಳ್ಳದ ಸೇತುವೆಗೆ ತಡೆಗೋಡೆಯೇ ಇಲ್ಲ. ಇದರಿಂದ ವಾಹನ ಸವಾರರು ನಿತ್ಯ ಜೀವ ಭಯದಲ್ಲೇ ಸಂಚರಿಸುವಂತಾಗಿದೆ.</p>.<p>ಕಮಲನಗರ ತಾಲ್ಲೂಕು ಕೇಂದ್ರದ ಕಚೇರಿ, ಶಾಲಾ-ಕಾಲೇಜು ಸೇರಿ ಇನ್ನಿತರ ಕೆಲಸ ಕಾರ್ಯಗಳಿಗೆ ಈ ಭಾಗದ ಜನರು ನಿತ್ಯ ಇದೇ ಮಾರ್ಗವಾಗಿ ಹೋಗುತ್ತಾರೆ. ಅಪಾಯ ಸಂಭವಿಸಿದರೆ ಯಾರು ಹೊಣೆ? ತಡೆಗೋಡೆ ನಿರ್ಮಿಸಲು ಅಧಿಕಾರಿಗಳು ಯಾಕೆ ಆಸಕ್ತಿ ತೋರುತ್ತಿಲ್ಲ ಎಂಬುದು ಸವಾರರ ಪ್ರಶ್ನೆ.</p>.<p>ಸೇತುವೆ ಇಳಿಜಾರು ರಸ್ತೆಯಲ್ಲಿ ಇರುವ ಕಾರಣ ವೇಗವಾಗಿ ಬರುವ ವಾಹನಗಳು ನಿಯಂತ್ರಣ ತಪ್ಪಿ ಸೇತುವೆ ಕೆಳಗೆ ಬೀಳುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ದ್ವಿಚಕ್ರ ವಾಹನ ಸವಾರರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಕೂಡ ಅಪಘಾತಕ್ಕೀಡಾದ ಉದಾಹರಣೆಗಳಿವೆ.</p>.<p>ಕೂಡಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸೇತುವೆಗೆ ತಡೆಗೋಡೆ ನಿರ್ಮಿಸಬೇಕು. ಸೇತುವೆ ಎತ್ತರ ಹೆಚ್ಚಿಸಬೇಕು ಎಂದು ಪ್ರಯಾಣಿಕರಾದ ಜಗನ್ನಾಥ ಪರಿಹಾರ, ಸಂಗಮೇಶ ಧರಣೆ, ಮಹೇಶ ಪಾಟೀಲ್, ದಿಗಂಬರ ಬಿರಾದಾರ, ಶೈಲೇಶ ಪೇನೆ, ಸಂಗಮೇಶ ವಲ್ಲೂರೆ ಒತ್ತಾಯಿಸಿದ್ದಾರೆ.</p>.<div><blockquote>ಕಮಲನಗರ ತಾಲ್ಲೂಕು ಕೇಂದ್ರಕ್ಕೆ ನಿತ್ಯ ನೂರಾರು ಜನ ಇದೇ ಮಾರ್ಗದಲ್ಲಿ ಸಂಚರಿಸುತ್ತಾರೆ. ಕೂಡಲೇ ಅಧಿಕಾರಿಗಳು ಗಮನಹರಿಸಿ ಸೇತುವೆಗೆ ತಡೆಗೋಡೆ ನಿರ್ಮಿಸಬೇಕು </blockquote><span class="attribution">ಮಂಜುನಾಥ ಸ್ವಾಮಿ ಕರವೇ ಅಧ್ಯಕ್ಷ ಕಮಲನಗರ</span></div>.<div><blockquote>ಇದು ಕಿರು ಸೇತುವೆ. ಈ ಸೇತುವೆಯ ಎತ್ತರ ಹೆಚ್ಚಿಸಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು</blockquote><span class="attribution"> ಶ್ರೀರಂಗ ಪರಿಹಾರ ತಾ.ಪಂ. ಮಾಜಿ ಅಧ್ಯಕ್ಷ</span></div>.<p><strong>ಸಂಪರ್ಕ ಕಡಿತ ಸಮಸ್ಯೆ:</strong></p><p> ಸೇತುವೆ ಇಳಿಜಾರಿನಲ್ಲಿದ್ದು ಮಳೆಗಾಲದಲ್ಲಿ ಸ್ವಲ್ಪ ಮಳೆ ಬಿದ್ದರೂ ಸೇತುವೆ ಮೇಲಿಂದ ನೀರು ಹರಿದು ಕಮಲನಗರ-ಔರಾದ್(ಬಾ) ಮುಖ್ಯರಸ್ತೆ ಸಂಪರ್ಕ ಕಡಿತಗೊಳ್ಳುತ್ತದೆ. ಇದರಿಂದ ದಾಬಕಾ ಡೋಣಗಾಂವ ತೋರಣಾ ಮುಧೋಳ ಮುರ್ಕಿ ಹಾಗೂ ಇನ್ನಿತರ ಗ್ರಾಮಗಳ ಸಾರ್ವಜನಿಕರು ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>