<p><strong>ಕಮಲನಗರ</strong>: ‘ಮಹಾತ್ಮ ಗಾಂಧಿ ಅವರು ಶಾಂತಿಯಿಂದಲೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ಗಾಂಧೀಜಿ ತತ್ವಾದರ್ಶಗಳನ್ನು ಪಾಲಿಸಿ, ಅವರ ಮಾರ್ಗದಲ್ಲಿ ನಡೆದರೆ ಮಾತ್ರ ಅವರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ’ ಎಂದು ಕಮಲನಗರ ತಾಲ್ಲೂಕಿನ ಗ್ರೇಡ್–2 ತಹಶೀಲ್ದಾರರು ರಮೇಶ ಪೆದ್ದೆ ತಿಳಿಸಿದರು.</p>.<p>ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಉಭಯ ನಾಯಕರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>‘ದೇಶದ 2ನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಸಾಧಾರಣ ಸಜ್ಜನಿಕೆ ವ್ಯಕ್ತಿತ್ವ ಹೊಂದಿದ್ದರು’ ಎಂದು ಬಣ್ಣಿಸಿದರು.</p>.<p>ಗೋಪಾಲ ಕೃಷ್ಣ, ಪ್ರವೀಣ್ ಬಿರಾದಾರ, ಝೇರೆಪ್ಪ ಸೇರಿದಂತೆ ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><strong>ಸಿದ್ಧರಾಮೇಶ್ವರ ಕಾಲೇಜು: </strong>ಪಟ್ಟಣದ ಸಿದ್ದರಾಮೇಶ್ವರ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ವಿಶ್ವನಾಥ ಕ್ವೀಡೆ ಮಾತನಾಡಿ, ‘ದೇಶದ ಏಕತೆ ಮತ್ತು ಅಖಂಡತೆಗೆ ಧಕ್ಕೆಯಾಗದಂತೆ ಅಹಿಂಸಾ ತತ್ವ ಅನುಸರಿಸಿ ನಮ್ಮ ದೇಶಕ್ಕೆ ಗಾಂಧೀಜಿ ಸ್ವಾತಂತ್ರ್ಯ ತಂದು ಕೊಟ್ಟರು. ನಾವೆಲ್ಲ ಅವರ ತತ್ವಗಳನ್ನು ಅಳವಡಿಸಿಕೊಂಡರೆ ನಮ್ಮ ಜೀವನ ಸಾರ್ಥಕವಾಗುತ್ತದೆ’ ಎಂದರು.</p>.<p>ಗುರುನಾನಕ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಉಮಾಶಂಕರ್, ಎನ್ಎಸ್ಎಸ್ ಅಧಿಕಾರಿ ಪ್ರೊ.ರಮೇಶ ಚವಾಣ್, ಮಂಜುನಾಥ, ಬಾಲಾಜಿ ಬೋಂಡ್ಲೆ, ಪ್ರವೀಣ್ ಶಿಂದೆ, ಲಕ್ಷ್ಮಿ, ಶಿವಕುಮಾರ ಪಾಟೀಲ, ಶ್ರಾವಣ ಕಾರಬಾರಿ, ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ</strong>: ‘ಮಹಾತ್ಮ ಗಾಂಧಿ ಅವರು ಶಾಂತಿಯಿಂದಲೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ಗಾಂಧೀಜಿ ತತ್ವಾದರ್ಶಗಳನ್ನು ಪಾಲಿಸಿ, ಅವರ ಮಾರ್ಗದಲ್ಲಿ ನಡೆದರೆ ಮಾತ್ರ ಅವರ ಜಯಂತಿ ಆಚರಣೆಗೆ ಅರ್ಥ ಬರುತ್ತದೆ’ ಎಂದು ಕಮಲನಗರ ತಾಲ್ಲೂಕಿನ ಗ್ರೇಡ್–2 ತಹಶೀಲ್ದಾರರು ರಮೇಶ ಪೆದ್ದೆ ತಿಳಿಸಿದರು.</p>.<p>ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಮಹಾತ್ಮ ಗಾಂಧಿಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಉಭಯ ನಾಯಕರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.</p>.<p>‘ದೇಶದ 2ನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಸಾಧಾರಣ ಸಜ್ಜನಿಕೆ ವ್ಯಕ್ತಿತ್ವ ಹೊಂದಿದ್ದರು’ ಎಂದು ಬಣ್ಣಿಸಿದರು.</p>.<p>ಗೋಪಾಲ ಕೃಷ್ಣ, ಪ್ರವೀಣ್ ಬಿರಾದಾರ, ಝೇರೆಪ್ಪ ಸೇರಿದಂತೆ ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.</p>.<p><strong>ಸಿದ್ಧರಾಮೇಶ್ವರ ಕಾಲೇಜು: </strong>ಪಟ್ಟಣದ ಸಿದ್ದರಾಮೇಶ್ವರ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ವಿಶ್ವನಾಥ ಕ್ವೀಡೆ ಮಾತನಾಡಿ, ‘ದೇಶದ ಏಕತೆ ಮತ್ತು ಅಖಂಡತೆಗೆ ಧಕ್ಕೆಯಾಗದಂತೆ ಅಹಿಂಸಾ ತತ್ವ ಅನುಸರಿಸಿ ನಮ್ಮ ದೇಶಕ್ಕೆ ಗಾಂಧೀಜಿ ಸ್ವಾತಂತ್ರ್ಯ ತಂದು ಕೊಟ್ಟರು. ನಾವೆಲ್ಲ ಅವರ ತತ್ವಗಳನ್ನು ಅಳವಡಿಸಿಕೊಂಡರೆ ನಮ್ಮ ಜೀವನ ಸಾರ್ಥಕವಾಗುತ್ತದೆ’ ಎಂದರು.</p>.<p>ಗುರುನಾನಕ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಉಮಾಶಂಕರ್, ಎನ್ಎಸ್ಎಸ್ ಅಧಿಕಾರಿ ಪ್ರೊ.ರಮೇಶ ಚವಾಣ್, ಮಂಜುನಾಥ, ಬಾಲಾಜಿ ಬೋಂಡ್ಲೆ, ಪ್ರವೀಣ್ ಶಿಂದೆ, ಲಕ್ಷ್ಮಿ, ಶಿವಕುಮಾರ ಪಾಟೀಲ, ಶ್ರಾವಣ ಕಾರಬಾರಿ, ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>