<p><strong>ಕಮಲನಗರ</strong>: ‘ಆಟೊ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸಿಪಿಐ ಶ್ರೀಕಾಂತ ಅಲ್ಲಾಪೂರ ಎಚ್ಚರಿಸಿದರು.</p>.<p>ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಟೊ ಚಾಲಕರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸತಕ್ಕದು. ವಾಹನ ಚಾಲನಾ ಪರವಾನಗಿ, ಮಾಲಿನ್ಯ ತಪಾಸಣಾ ಪ್ರಮಾಣ ಪತ್ರ ಒಳಗೊಂಡಂತೆ ಎಲ್ಲಾ ದಾಖಲೆಗಳನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು. ನಿಗದಿತ ಅವಧಿಯೊಳಗೆ ಅದನ್ನು ನವೀಕರಿಸಿಕೊಳ್ಳಬೇಕು’ ಎಂದರು.</p>.<p>ಪಿಎಸ್ಐ ಆಶಾ ರಾಠೋಡ ಮಾತನಾಡಿ, ‘ಆಟೊ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಬಾಡಿಗೆ ವಸೂಲಾತಿ ಮಾಡುವುದು, ಸಮವಸ್ತ್ರ ಧರಿಸದೆ ಕಾನೂನು ಉಲ್ಲಂಘನೆ ಮಾಡಿದ್ದಲ್ಲಿ ದಂಡ ವಿಧಿಸಲಾಗುವುದು’ ಎಂದು ತಿಳಿಸಿದರು.</p>.<p>ಆಟೊ ಚಾಲಕರಾದ ಜ್ಞಾನೋಬಾ ಕಾಂಬಳೆ, ಹಣಮಂತ, ಅಮಜದ್, ಫರದೀನ್, ನಾಗನಾಥ, ಇಮ್ರಾನ್, ಮಹೇಶ, ರಾಮ, ಸುರಜ, ಪ್ರದೀಪ, ಫೀರೋಜ್, ಪ್ರಶಾಂತ, ಗೋವಿಂದ, ಸಾಗರ, ಸಂದೀಪ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.</p>
<p><strong>ಕಮಲನಗರ</strong>: ‘ಆಟೊ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸಿಪಿಐ ಶ್ರೀಕಾಂತ ಅಲ್ಲಾಪೂರ ಎಚ್ಚರಿಸಿದರು.</p>.<p>ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಟೊ ಚಾಲಕರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಪ್ರತಿಯೊಬ್ಬ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸತಕ್ಕದು. ವಾಹನ ಚಾಲನಾ ಪರವಾನಗಿ, ಮಾಲಿನ್ಯ ತಪಾಸಣಾ ಪ್ರಮಾಣ ಪತ್ರ ಒಳಗೊಂಡಂತೆ ಎಲ್ಲಾ ದಾಖಲೆಗಳನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು. ನಿಗದಿತ ಅವಧಿಯೊಳಗೆ ಅದನ್ನು ನವೀಕರಿಸಿಕೊಳ್ಳಬೇಕು’ ಎಂದರು.</p>.<p>ಪಿಎಸ್ಐ ಆಶಾ ರಾಠೋಡ ಮಾತನಾಡಿ, ‘ಆಟೊ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಬಾಡಿಗೆ ವಸೂಲಾತಿ ಮಾಡುವುದು, ಸಮವಸ್ತ್ರ ಧರಿಸದೆ ಕಾನೂನು ಉಲ್ಲಂಘನೆ ಮಾಡಿದ್ದಲ್ಲಿ ದಂಡ ವಿಧಿಸಲಾಗುವುದು’ ಎಂದು ತಿಳಿಸಿದರು.</p>.<p>ಆಟೊ ಚಾಲಕರಾದ ಜ್ಞಾನೋಬಾ ಕಾಂಬಳೆ, ಹಣಮಂತ, ಅಮಜದ್, ಫರದೀನ್, ನಾಗನಾಥ, ಇಮ್ರಾನ್, ಮಹೇಶ, ರಾಮ, ಸುರಜ, ಪ್ರದೀಪ, ಫೀರೋಜ್, ಪ್ರಶಾಂತ, ಗೋವಿಂದ, ಸಾಗರ, ಸಂದೀಪ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.</p>