<p>ಕಮಲನಗರ: ಪಟ್ಟಣದ ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ, ಗುರಪ್ಪಾ ಟೊಣ್ಣೆ ಪ್ರಾಥಮಿಕ ಶಾಲೆ ಹಾಗೂ ಗುರುಕಾರುಣ್ಯ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಸೋಮವಾರ ಶಾಲೆ ಪ್ರಾರಂಭೋತ್ಸವದ ನಿಮಿತ್ತ ಮಕ್ಕಳಿಗೆ ಪುಷ್ಪವೃಷ್ಟಿ ಮಾಡಿ ಸಿಹಿ ತಿನಿಸಿ ಸ್ವಾಗತಿಸಲಾಯಿತು.</p>.<p>2026-27ನೇ ಶೈಕ್ಷಣಿಕ ವರ್ಷಕ್ಕೆ ಶಾಲಾ ಆರಂಭೋತ್ಸವಕ್ಕೆ ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಪಟ್ಟಣದ ತುಂಬೆಲ್ಲ ಶಾಲಾ ಪ್ರಾರಂಭೊತ್ಸವದ ಕುರಿತು ಜಾಗೃತಿ ಜಾಥಾ ಮಾಡಲಾಯಿತು.</p>.<p>ತಹಶೀಲ್ದಾರ್ ಅಮಿತಕುಮಾರ ಕುಲಕರ್ಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು.</p>.<p>ಪಿಎಸ್ಐ ಆಶಾ ರಾಠೋಡ ಮತ್ತು ನಿವೃತ್ತ ಪ್ರಾಚಾರ್ಯ ಎಸ್.ಎಸ್ ಮೈನಾಳೆ ಬಸವ ಪೂಜೆ ನೆರವೇರಿಸಿದರು.</p>.<p>ಶಾಲೆಯ ಆಡಳಿತಾಧಿಕಾರಿ ಚನ್ನಬಸವ ಘಾಳೆ, ನಿವೃತ ಪಿಎಸ್ಐ ರಮೇಶ ಟೊಕರೆ, ನಿವೃತ ಶಿಕ್ಷಕ ಶೇಷರಾವ ಬಿರಾದಾರ, ಪಾಲಕರ ಪ್ರತಿನಿಧಿ ಶರಣಪ್ಪಾ ನಿಡೋದೆ, ಗುರುಕಾರುಣ್ಯ ಪಬ್ಲಿಕ ಸ್ಕೂಲನ್ ಪ್ರಾಂಶುಪಾಲರಾದ ಪ್ರೀಯಂಕಾ ಪವಾರ ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.</p>.<p>ಹಾವಗಿರಾವ ಮಠಪತಿ ಹಾಗೂ ವಿವೇಕಾನಂದ ಬಿರಾದಾರ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-33-1639915948</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮಲನಗರ: ಪಟ್ಟಣದ ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆ, ಗುರಪ್ಪಾ ಟೊಣ್ಣೆ ಪ್ರಾಥಮಿಕ ಶಾಲೆ ಹಾಗೂ ಗುರುಕಾರುಣ್ಯ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಸೋಮವಾರ ಶಾಲೆ ಪ್ರಾರಂಭೋತ್ಸವದ ನಿಮಿತ್ತ ಮಕ್ಕಳಿಗೆ ಪುಷ್ಪವೃಷ್ಟಿ ಮಾಡಿ ಸಿಹಿ ತಿನಿಸಿ ಸ್ವಾಗತಿಸಲಾಯಿತು.</p>.<p>2026-27ನೇ ಶೈಕ್ಷಣಿಕ ವರ್ಷಕ್ಕೆ ಶಾಲಾ ಆರಂಭೋತ್ಸವಕ್ಕೆ ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಪಟ್ಟಣದ ತುಂಬೆಲ್ಲ ಶಾಲಾ ಪ್ರಾರಂಭೊತ್ಸವದ ಕುರಿತು ಜಾಗೃತಿ ಜಾಥಾ ಮಾಡಲಾಯಿತು.</p>.<p>ತಹಶೀಲ್ದಾರ್ ಅಮಿತಕುಮಾರ ಕುಲಕರ್ಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು.</p>.<p>ಪಿಎಸ್ಐ ಆಶಾ ರಾಠೋಡ ಮತ್ತು ನಿವೃತ್ತ ಪ್ರಾಚಾರ್ಯ ಎಸ್.ಎಸ್ ಮೈನಾಳೆ ಬಸವ ಪೂಜೆ ನೆರವೇರಿಸಿದರು.</p>.<p>ಶಾಲೆಯ ಆಡಳಿತಾಧಿಕಾರಿ ಚನ್ನಬಸವ ಘಾಳೆ, ನಿವೃತ ಪಿಎಸ್ಐ ರಮೇಶ ಟೊಕರೆ, ನಿವೃತ ಶಿಕ್ಷಕ ಶೇಷರಾವ ಬಿರಾದಾರ, ಪಾಲಕರ ಪ್ರತಿನಿಧಿ ಶರಣಪ್ಪಾ ನಿಡೋದೆ, ಗುರುಕಾರುಣ್ಯ ಪಬ್ಲಿಕ ಸ್ಕೂಲನ್ ಪ್ರಾಂಶುಪಾಲರಾದ ಪ್ರೀಯಂಕಾ ಪವಾರ ಹಾಗೂ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.</p>.<p>ಹಾವಗಿರಾವ ಮಠಪತಿ ಹಾಗೂ ವಿವೇಕಾನಂದ ಬಿರಾದಾರ ನಿರೂಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-33-1639915948</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>