<p><strong>ಕಮಲನಗರ</strong>: ಪಟ್ಟಣದ 2ನೇ ವಾರ್ಡ್ನ ವಿಶ್ವಾಸ ನಗರ ಬಡಾವಣೆಯ ಹಲವು ಕಡೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ರಸ್ತೆ ಮೇಲೆ ಹರಿದು ದುರ್ನಾತ ಬೀರುತ್ತಿದೆ.</p>.<p>ಬಡಾವಣೆಯಲ್ಲಿ ಕೆಲವೆಡೆ ಸಿಸಿ ರಸ್ತೆ ನಿರ್ಮಾಣ ಮಾಡುವಾಗ ಚರಂಡಿ ವ್ಯವಸ್ಥೆ ಕಲ್ಪಿಸದ ಕಾರಣ ಮಳೆ ಹಾಗೂ ತ್ಯಾಜ್ಯ ನೀರು ರಸ್ತೆಯಲ್ಲೇ ಹರಿಯುವಂತಾಗಿದೆ. ಅಲ್ಲದೇ ಬಹುತೇಕ ಕಡೆ ಚರಂಡಿ ಕೊಳಚೆ ನೀರು ರಸ್ತೆಯ ಮೇಲೆ ನಿಲ್ಲುತ್ತಿದೆ. ಇದರಿಂದ ಸೊಳ್ಳೆಗಳ ಕಾಟ ವೀಪರಿತವಾಗಿದ್ದು ಸಾಂಕ್ರಾಮಿಕ ರೋಗದ ಭಯ ಎದುರಾಗಿದೆ.</p><p>ರಸ್ತೆಯ ಮೇಲೆ ಚರಂಡಿ, ಕೊಳಚೆ ನೀರು ಹರಿಯುತ್ತಿದ್ದು ಸಾರ್ವಜನಿಕರು ದುರ್ವಾಸನೆಗೆ ಹೈರಾಣಾಗಿದ್ದಾರೆ. ನಿತ್ಯದ ಸಂಚಾರಕ್ಕೆ ಅಡಚಣೆಯಾಗಿ ಮಕ್ಕಳು, ವೃದ್ಧರು, ಮಹಿಳೆಯರು ತೊಂದರೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಚರಂಡಿ ನಿರ್ಮಿಸಿಕೊಡಬೇಕು ಎಂದು ಬಡಾವಣೆಯ ನಿವಾಸಿ ಮುಜ್ಜು ಖುರೇಶಿ ಒತ್ತಾಯಿಸಿದ್ದಾರೆ.</p><p>ಸಂಬಂಧಿತ ಅಧಿಕಾರಿಗಳು ಕೂಡಲೇ ವಾರ್ಡ್ ನಂ2 ರಲ್ಲಿಯ ವಿಶ್ವಾಸನಗರ ಬಡಾವಣೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><blockquote>ವಿಶ್ವಾಸನಗರ ಬಡಾವಣೆಯಲ್ಲಿ ಕೆಲಕಡೆ ಮಾತ್ರ ಸಿಸಿ ರಸ್ತೆ ನಿರ್ಮಿಸಲಾಗಿದೆ. ಆದರೆ ಚರಂಡಿ ನಿರ್ಮಿಸದ ಕಾರಣ ಮನೆಗಳ ದಿನಬಳಕೆಯ ನೀರು ಹಾಗೂ ಮಳೆ ನೀರು ರಸ್ತೆ ಮೇಲೆ ಹರಿದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ಚರಂಡಿ ವ್ಯವಸ್ಥೆ ಮಾಡಿಸಿಕೊಡಬೇಕು </blockquote><span class="attribution">ಜನಾರ್ಧನ ಸಾವರ್ಗೆಕರ್, ಕನ್ನಡ ಸೇನೆ ಅಧ್ಯಕ್ಷ, ಕಮಲನಗರ </span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-33-2025584748</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ</strong>: ಪಟ್ಟಣದ 2ನೇ ವಾರ್ಡ್ನ ವಿಶ್ವಾಸ ನಗರ ಬಡಾವಣೆಯ ಹಲವು ಕಡೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಕೊಳಚೆ ನೀರು ರಸ್ತೆ ಮೇಲೆ ಹರಿದು ದುರ್ನಾತ ಬೀರುತ್ತಿದೆ.</p>.<p>ಬಡಾವಣೆಯಲ್ಲಿ ಕೆಲವೆಡೆ ಸಿಸಿ ರಸ್ತೆ ನಿರ್ಮಾಣ ಮಾಡುವಾಗ ಚರಂಡಿ ವ್ಯವಸ್ಥೆ ಕಲ್ಪಿಸದ ಕಾರಣ ಮಳೆ ಹಾಗೂ ತ್ಯಾಜ್ಯ ನೀರು ರಸ್ತೆಯಲ್ಲೇ ಹರಿಯುವಂತಾಗಿದೆ. ಅಲ್ಲದೇ ಬಹುತೇಕ ಕಡೆ ಚರಂಡಿ ಕೊಳಚೆ ನೀರು ರಸ್ತೆಯ ಮೇಲೆ ನಿಲ್ಲುತ್ತಿದೆ. ಇದರಿಂದ ಸೊಳ್ಳೆಗಳ ಕಾಟ ವೀಪರಿತವಾಗಿದ್ದು ಸಾಂಕ್ರಾಮಿಕ ರೋಗದ ಭಯ ಎದುರಾಗಿದೆ.</p><p>ರಸ್ತೆಯ ಮೇಲೆ ಚರಂಡಿ, ಕೊಳಚೆ ನೀರು ಹರಿಯುತ್ತಿದ್ದು ಸಾರ್ವಜನಿಕರು ದುರ್ವಾಸನೆಗೆ ಹೈರಾಣಾಗಿದ್ದಾರೆ. ನಿತ್ಯದ ಸಂಚಾರಕ್ಕೆ ಅಡಚಣೆಯಾಗಿ ಮಕ್ಕಳು, ವೃದ್ಧರು, ಮಹಿಳೆಯರು ತೊಂದರೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಚರಂಡಿ ನಿರ್ಮಿಸಿಕೊಡಬೇಕು ಎಂದು ಬಡಾವಣೆಯ ನಿವಾಸಿ ಮುಜ್ಜು ಖುರೇಶಿ ಒತ್ತಾಯಿಸಿದ್ದಾರೆ.</p><p>ಸಂಬಂಧಿತ ಅಧಿಕಾರಿಗಳು ಕೂಡಲೇ ವಾರ್ಡ್ ನಂ2 ರಲ್ಲಿಯ ವಿಶ್ವಾಸನಗರ ಬಡಾವಣೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.</p>.<div><blockquote>ವಿಶ್ವಾಸನಗರ ಬಡಾವಣೆಯಲ್ಲಿ ಕೆಲಕಡೆ ಮಾತ್ರ ಸಿಸಿ ರಸ್ತೆ ನಿರ್ಮಿಸಲಾಗಿದೆ. ಆದರೆ ಚರಂಡಿ ನಿರ್ಮಿಸದ ಕಾರಣ ಮನೆಗಳ ದಿನಬಳಕೆಯ ನೀರು ಹಾಗೂ ಮಳೆ ನೀರು ರಸ್ತೆ ಮೇಲೆ ಹರಿದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೂಡಲೇ ಚರಂಡಿ ವ್ಯವಸ್ಥೆ ಮಾಡಿಸಿಕೊಡಬೇಕು </blockquote><span class="attribution">ಜನಾರ್ಧನ ಸಾವರ್ಗೆಕರ್, ಕನ್ನಡ ಸೇನೆ ಅಧ್ಯಕ್ಷ, ಕಮಲನಗರ </span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-33-2025584748</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>