<p><strong>ಕಮಲನಗರ:</strong> ‘ಹಿಂದೂಸ್ಥಾನದಲ್ಲಿರುವ ನಾವೆಲ್ಲರೂ ಹಿಂದುಗಳು. ನಾವು ಒಳ್ಳೆಯವರೊಂದಿಗೆ ಸಂಪರ್ಕ ಹೊಂದಬೇಕು. ಹಿಂದೂಗಳಿಂದ ಭಾರತ ರಕ್ಷಣೆಯಾಗುತ್ತದೆ’ ಎಂದು ಡೋಣಗಾಂವ(ಎಂ), ರಂಡ್ಯಾಳ, ಉದಗೀರನ್ ಹಾವಗೀಸ್ವಾಮಿ ಮಠದ ಪೀಠಾಧಿಪತಿ ಶಂಭುಲಿಂಗ ಶಿವಾಚಾರ್ಯರು ಹೇಳಿದರು.</p>.<p>ತಾಲ್ಲೂಕಿನ ಕೋಟಗ್ಯಾಳ ಗ್ರಾಮದ ಮಹಾದೇವ ಮಂದಿರದ ಆವರಣದಲ್ಲಿ ಭಾನುವಾರ ರಾತ್ರಿ ಹಮ್ಮಿಕೊಂಡ ಹಿಂದೂ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹಿಂದೂಗಳಿಂದ ದೇಶದ ಸಂಸ್ಕೃತಿ ಬೆಳೆದಿದೆ. ಭಾರತೀಯ ಸಂಸ್ಕೃತಿ ಜಗತ್ತಿಗೆ ಒಳ್ಳೆಯದನ್ನು ಮಾಡಿದೆ. ಹಿಂದೂ ಸಂಘಟನೆ, ಜಾಗೃತಿಯಿಂದ ಜಗತ್ತಿಗೆ ಒಳ್ಳೆಯದಾಗಿದೆ. ಹಿಂದೂ ಸಮಾಜ ಒಂದಾಗಿ ಸಮಾನತೆಯಿಂದ ಬಾಳಬೇಕು ಎಂದು ಹೇಳಿದರು.</p>.<p>ಹಿಂದೂ ಸಂಸ್ಕೃತಿಯು ಬದುಕಿಸುವ ಸಂಸ್ಕೃತಿ, ಧರ್ಮ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಎಲ್ಲರೂ ಸ್ವಾಭಿಮಾನ, ಭಾಷಾಭಿಮಾನ, ದೇಶಾಭಿಮಾನ, ಧರ್ಮಾಭಿಮಾನ ಹೊಂದಬೇಕು. ಹಿಂದೂಗಳು ನಾವುಲ್ಲ ಒಂದೇ ಎನ್ನುವ ಭಾವ ಮೂಡಬೇಕು ಎಂದರು.</p>.<p>ಉದಗೀರನ್ ವಕ್ತಾರ ಜಿಲ್ಲಾ ಪ್ರಚಾರಕ ರಾಜೇಂದ್ರ ಸಂಗ್ರಾಮ ಬಿರಾದಾರ, ಬಾಲಾಜಿ ಪಾಟೀಲ್, ಪ್ರಮುಖರಾದ ಸಿದ್ದಯ್ಯ ಸ್ವಾಮಿ, ಮಷ್ಣಪ್ಪ ಮೇತ್ರೆ, ರಾಜೇಂದ್ರ ಬಿರಾದಾರ, ಗಣೇಶ ಕಾರೆಗಾವೆ, ಶೈಲೇಶ ಪೇನೆ ಹಾಗೂ ಇನ್ನಿತರರು ಇದ್ದರು.</p>.<p>ಮಹಾದೇವ ಹಜನಾಳೆ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ:</strong> ‘ಹಿಂದೂಸ್ಥಾನದಲ್ಲಿರುವ ನಾವೆಲ್ಲರೂ ಹಿಂದುಗಳು. ನಾವು ಒಳ್ಳೆಯವರೊಂದಿಗೆ ಸಂಪರ್ಕ ಹೊಂದಬೇಕು. ಹಿಂದೂಗಳಿಂದ ಭಾರತ ರಕ್ಷಣೆಯಾಗುತ್ತದೆ’ ಎಂದು ಡೋಣಗಾಂವ(ಎಂ), ರಂಡ್ಯಾಳ, ಉದಗೀರನ್ ಹಾವಗೀಸ್ವಾಮಿ ಮಠದ ಪೀಠಾಧಿಪತಿ ಶಂಭುಲಿಂಗ ಶಿವಾಚಾರ್ಯರು ಹೇಳಿದರು.</p>.<p>ತಾಲ್ಲೂಕಿನ ಕೋಟಗ್ಯಾಳ ಗ್ರಾಮದ ಮಹಾದೇವ ಮಂದಿರದ ಆವರಣದಲ್ಲಿ ಭಾನುವಾರ ರಾತ್ರಿ ಹಮ್ಮಿಕೊಂಡ ಹಿಂದೂ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹಿಂದೂಗಳಿಂದ ದೇಶದ ಸಂಸ್ಕೃತಿ ಬೆಳೆದಿದೆ. ಭಾರತೀಯ ಸಂಸ್ಕೃತಿ ಜಗತ್ತಿಗೆ ಒಳ್ಳೆಯದನ್ನು ಮಾಡಿದೆ. ಹಿಂದೂ ಸಂಘಟನೆ, ಜಾಗೃತಿಯಿಂದ ಜಗತ್ತಿಗೆ ಒಳ್ಳೆಯದಾಗಿದೆ. ಹಿಂದೂ ಸಮಾಜ ಒಂದಾಗಿ ಸಮಾನತೆಯಿಂದ ಬಾಳಬೇಕು ಎಂದು ಹೇಳಿದರು.</p>.<p>ಹಿಂದೂ ಸಂಸ್ಕೃತಿಯು ಬದುಕಿಸುವ ಸಂಸ್ಕೃತಿ, ಧರ್ಮ ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಎಲ್ಲರೂ ಸ್ವಾಭಿಮಾನ, ಭಾಷಾಭಿಮಾನ, ದೇಶಾಭಿಮಾನ, ಧರ್ಮಾಭಿಮಾನ ಹೊಂದಬೇಕು. ಹಿಂದೂಗಳು ನಾವುಲ್ಲ ಒಂದೇ ಎನ್ನುವ ಭಾವ ಮೂಡಬೇಕು ಎಂದರು.</p>.<p>ಉದಗೀರನ್ ವಕ್ತಾರ ಜಿಲ್ಲಾ ಪ್ರಚಾರಕ ರಾಜೇಂದ್ರ ಸಂಗ್ರಾಮ ಬಿರಾದಾರ, ಬಾಲಾಜಿ ಪಾಟೀಲ್, ಪ್ರಮುಖರಾದ ಸಿದ್ದಯ್ಯ ಸ್ವಾಮಿ, ಮಷ್ಣಪ್ಪ ಮೇತ್ರೆ, ರಾಜೇಂದ್ರ ಬಿರಾದಾರ, ಗಣೇಶ ಕಾರೆಗಾವೆ, ಶೈಲೇಶ ಪೇನೆ ಹಾಗೂ ಇನ್ನಿತರರು ಇದ್ದರು.</p>.<p>ಮಹಾದೇವ ಹಜನಾಳೆ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>