‘ರಸ್ತೆಯ ಮೇಲೆ ದೊಡ್ಡ ಪ್ರಮಾಣದ ತಗ್ಗು ಗುಂಡಿಗಳು ಬಿದ್ದ ಕಾರಣ ವಾಹನ ಸವಾರರು ನರಕಯಾತನೆ ಪಡುವಂಥ ಸ್ಥಿತಿ ನಿರ್ಮಾಣವಾಗಿದೆ. ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರು ಸಂಕಟ ಪಡುವಂತಾಗಿದೆ’ ಎಂದು ಮದನೂರ ಗ್ರಾಮದ ಜಯಪ್ರಕಾಶ ಬಿರಾದಾರ, ಆನಂದ, ಸಂದೀಪ ಅವ್ಯವಸ್ಥೆ ಕುರಿತು ದೂರಿದ್ದಾರೆ.