<p><strong>ಕಮಲನಗರ</strong>: ಮಹಾರಾಷ್ಟ್ರದ ಉದಗೀರ ಪಟ್ಟಣದಲ್ಲಿ ಸೋಮವಾರ ನಸುಕಿನ ಜಾವ 2ಕ್ಕೆ ಹಾವಗೀಸ್ವಾಮಿ ಅವರ ಪಲ್ಲಕ್ಕಿ ಉತ್ಸವ ವೈಭವಯುತವಾಗಿ ಜರುಗಿತು.</p>.<p>ಮೆರವಣಿಗೆ ಹಾವಗೀಸ್ವಾಮಿ ಮಠದಿಂದ ಆರಂಭಗೊಂಡು ಅಗ್ಗಿ ಬಸವಣ್ಣ ಮೈದಾನದವರೆಗೆ ಅದ್ಧೂರಿಯಾಗಿ ಸಾಗಿತು. ಉತ್ಸವ ಸಾಗುವ ರಸ್ತೆಗಳು ವಿದ್ಯುತ್ದೀಪ ಹಾಗೂ ತಳಿರು ತೋರಣಗಳಿಂದ ಅಲಂಕೃತಗೊಂಡಿದ್ದವು. ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮನೆಗಳ ಮುಂದೆ ಬಣ್ಣ ಬಣ್ಣದ ರಂಗೋಲಿ ಕಂಗೋಳಿಸುತ್ತಿದ್ದವು.</p>.<p>ಹಾವಗೀಸ್ವಾಮಿ ಅವರ ಪಲ್ಲಕ್ಕಿ ಉತ್ಸವ ಬರುತ್ತಿದ್ದಂತೆ ಮಠದ ಪೀಠಾಧಿಪತಿ ಶಂಭುಲಿಂಗ ಶಿವಾಚಾರ್ಯ ಅವರ ಪಾದಪೂಜೆ ಮಾಡಿ ಹಾವಗೀಸ್ವಾಮಿ ಅವರ ಮೂರ್ತಿಯ ದರ್ಶನ ಪಡೆದು ಭಕ್ತಿ ಮೆರೆದರು. ಬಾಜಾ-ಭಜಂತ್ರಿಗಳ ಸದ್ದು, ಭಜನೆ ಗಮನಸೆಳೆಯಿತು.</p>.<p><strong>ಅಗ್ನಿ ಪೂಜೆ: </strong>ಹಾವಗೀಸ್ವಾಮಿ ಜಾತ್ರಾ ಮಹೋತ್ಸವದ ನಿಮಿತ್ತ ಅಗ್ಗಿ ಬಸವಣ್ಣ ಮೈದಾನದಲ್ಲಿ ಸೋಮವಾರ ನಸುಕಿನ ಜಾವ 5ಕ್ಕೆ ಮಠದ ಪೀಠಾಧಿಪತಿ ಶಂಭುಲಿಂಗ ಶಿವಾಚಾರ್ಯರು ಅಗ್ನಿ ಕುಂಡಕ್ಕೆ ಪೂಜೆ ಸಲ್ಲಿಸಿದರು.</p>.<p>ಸಹಸ್ರಾರು ಭಕ್ತರು ಅಗ್ನಿ ದೇವತೆಗೆ ಪೂಜೆ ಸಲ್ಲಿಸಿದರು. ನಂತರ ಕಾಯಿ-ಕರ್ಪೂರ, ಪುಷ್ಪಮಾಲೆ ಹಿಡಿದುಕೊಂಡು ಸರತಿಯಲ್ಲಿ ನಿಂತು ದೇಗುಲ ಪ್ರವೇಶಿಸಿ ಹಾವಗೀಸ್ವಾಮಿ ದರ್ಶನ ಪಡೆದರು.</p>.<p>ಶಂಕರಲಿಂಗ ಶಿವಾಚಾರ್ಯ ಹಣೇಗಾಂವ, ಬಸವಲಿಂಗ ಶಿವಾಚಾರ್ಯರು ಕವಳಾಸ, ಉಮಾಕಾಂತ ದೇಶಿ ಕೇಂದ್ರ ಸ್ವಾಮಿಜಿ ಹಾಗೂ ಭಜನೆ ಮಂಡಳಿಯವರು, ಮಹಿಳೆಯರು, ಯುವಕರು, ಮಕ್ಕಳು, ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. <br /> ಮಹಾರಾಷ್ಟ್ರ, ಕರ್ನಾಟಕ ಹಾಗೂ ತೇಲಂಗಾಣದಿಂದ ಭಕ್ತರು ಆಗಮಿಸಿ ಹಾವಗೀಸ್ವಾಮಿ ದರ್ಶನ ಪಡೆದು ಪುನೀತರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ</strong>: ಮಹಾರಾಷ್ಟ್ರದ ಉದಗೀರ ಪಟ್ಟಣದಲ್ಲಿ ಸೋಮವಾರ ನಸುಕಿನ ಜಾವ 2ಕ್ಕೆ ಹಾವಗೀಸ್ವಾಮಿ ಅವರ ಪಲ್ಲಕ್ಕಿ ಉತ್ಸವ ವೈಭವಯುತವಾಗಿ ಜರುಗಿತು.</p>.<p>ಮೆರವಣಿಗೆ ಹಾವಗೀಸ್ವಾಮಿ ಮಠದಿಂದ ಆರಂಭಗೊಂಡು ಅಗ್ಗಿ ಬಸವಣ್ಣ ಮೈದಾನದವರೆಗೆ ಅದ್ಧೂರಿಯಾಗಿ ಸಾಗಿತು. ಉತ್ಸವ ಸಾಗುವ ರಸ್ತೆಗಳು ವಿದ್ಯುತ್ದೀಪ ಹಾಗೂ ತಳಿರು ತೋರಣಗಳಿಂದ ಅಲಂಕೃತಗೊಂಡಿದ್ದವು. ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮನೆಗಳ ಮುಂದೆ ಬಣ್ಣ ಬಣ್ಣದ ರಂಗೋಲಿ ಕಂಗೋಳಿಸುತ್ತಿದ್ದವು.</p>.<p>ಹಾವಗೀಸ್ವಾಮಿ ಅವರ ಪಲ್ಲಕ್ಕಿ ಉತ್ಸವ ಬರುತ್ತಿದ್ದಂತೆ ಮಠದ ಪೀಠಾಧಿಪತಿ ಶಂಭುಲಿಂಗ ಶಿವಾಚಾರ್ಯ ಅವರ ಪಾದಪೂಜೆ ಮಾಡಿ ಹಾವಗೀಸ್ವಾಮಿ ಅವರ ಮೂರ್ತಿಯ ದರ್ಶನ ಪಡೆದು ಭಕ್ತಿ ಮೆರೆದರು. ಬಾಜಾ-ಭಜಂತ್ರಿಗಳ ಸದ್ದು, ಭಜನೆ ಗಮನಸೆಳೆಯಿತು.</p>.<p><strong>ಅಗ್ನಿ ಪೂಜೆ: </strong>ಹಾವಗೀಸ್ವಾಮಿ ಜಾತ್ರಾ ಮಹೋತ್ಸವದ ನಿಮಿತ್ತ ಅಗ್ಗಿ ಬಸವಣ್ಣ ಮೈದಾನದಲ್ಲಿ ಸೋಮವಾರ ನಸುಕಿನ ಜಾವ 5ಕ್ಕೆ ಮಠದ ಪೀಠಾಧಿಪತಿ ಶಂಭುಲಿಂಗ ಶಿವಾಚಾರ್ಯರು ಅಗ್ನಿ ಕುಂಡಕ್ಕೆ ಪೂಜೆ ಸಲ್ಲಿಸಿದರು.</p>.<p>ಸಹಸ್ರಾರು ಭಕ್ತರು ಅಗ್ನಿ ದೇವತೆಗೆ ಪೂಜೆ ಸಲ್ಲಿಸಿದರು. ನಂತರ ಕಾಯಿ-ಕರ್ಪೂರ, ಪುಷ್ಪಮಾಲೆ ಹಿಡಿದುಕೊಂಡು ಸರತಿಯಲ್ಲಿ ನಿಂತು ದೇಗುಲ ಪ್ರವೇಶಿಸಿ ಹಾವಗೀಸ್ವಾಮಿ ದರ್ಶನ ಪಡೆದರು.</p>.<p>ಶಂಕರಲಿಂಗ ಶಿವಾಚಾರ್ಯ ಹಣೇಗಾಂವ, ಬಸವಲಿಂಗ ಶಿವಾಚಾರ್ಯರು ಕವಳಾಸ, ಉಮಾಕಾಂತ ದೇಶಿ ಕೇಂದ್ರ ಸ್ವಾಮಿಜಿ ಹಾಗೂ ಭಜನೆ ಮಂಡಳಿಯವರು, ಮಹಿಳೆಯರು, ಯುವಕರು, ಮಕ್ಕಳು, ಸಹಸ್ರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. <br /> ಮಹಾರಾಷ್ಟ್ರ, ಕರ್ನಾಟಕ ಹಾಗೂ ತೇಲಂಗಾಣದಿಂದ ಭಕ್ತರು ಆಗಮಿಸಿ ಹಾವಗೀಸ್ವಾಮಿ ದರ್ಶನ ಪಡೆದು ಪುನೀತರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>