<p>ಕಮಲನಗರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕ ಪದಾಧಿಕಾರಿಗಳ ನೇತೃತ್ವದಲ್ಲಿ ಕಬ್ಬು ಬಿಲ್ಲು ಪಾವತಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಅಮಿತಕುಮಾರ ಕುಲಕರ್ಣಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ರೈತ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಪ್ರವೀಣ ಕುಲಕರ್ಣಿ ಮಾತನಾಡಿ, ‘ರೈತ ಬಾಂಧವರೂ ತಮ್ಮ ಕಬ್ಬು ಸಾಗಣೆ ಮಾಡಿ ಎರಡು ತಿಂಗಳಾದರೂ ಕಬ್ಬು ಸಾಗಣೆ ಬಿಲ್ಲು ಪಾವತಿಯಾಗಿಲ್ಲದಿರುವುದು ದುಖಃಕರ ಸಂಗತಿಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಮುಂದಿನ 10 ದಿನಗಳ ಒಳಗಾಗಿ ರೈತರ ಕಬ್ಬಿನ ಬಿಲ್ ಪಾವತಿ ಮಾಡದೇ ಇದ್ದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಸಂಘಟನೆ ಪ್ರಮುಖರು ಎಚ್ಚರಿಸಿದರು.</p>.<p>ರೈತ ಸಂಘದ ಗೌರವಧ್ಯಕ್ಷ ವೈಜನಾಥ ವಡ್ಡೆ, ಕಾರ್ಯದರ್ಶಿ ವಿಠ್ಠಲರಾವ ಪಾಟೀಲ, ರಾಮೇಶ್ವರ ಶಿವಣಕರ, ಮನೋಜ ಪೊಲೀಸ್ ಪಾಟೀಲ, ಧನರಾಜ ಭವರಾ, ವಿಜಯಕುಮಾರ ಪ್ರಭುರಾವ, ರಾಜಕುಮಾರ ವಡಗಾಂವೆ, ನೀಲಾಂಬಿಕಾದೇವಿ ಗಳಗೆ, ಉಮಾಕಾಂತ ಬಚ್ಚಣ್ಣಾ ಸೇರಿದಂತೆ ಇನ್ನಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-33-1833668909</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಮಲನಗರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕ ಪದಾಧಿಕಾರಿಗಳ ನೇತೃತ್ವದಲ್ಲಿ ಕಬ್ಬು ಬಿಲ್ಲು ಪಾವತಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಅಮಿತಕುಮಾರ ಕುಲಕರ್ಣಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.</p>.<p>ರೈತ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಪ್ರವೀಣ ಕುಲಕರ್ಣಿ ಮಾತನಾಡಿ, ‘ರೈತ ಬಾಂಧವರೂ ತಮ್ಮ ಕಬ್ಬು ಸಾಗಣೆ ಮಾಡಿ ಎರಡು ತಿಂಗಳಾದರೂ ಕಬ್ಬು ಸಾಗಣೆ ಬಿಲ್ಲು ಪಾವತಿಯಾಗಿಲ್ಲದಿರುವುದು ದುಖಃಕರ ಸಂಗತಿಯಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಮುಂದಿನ 10 ದಿನಗಳ ಒಳಗಾಗಿ ರೈತರ ಕಬ್ಬಿನ ಬಿಲ್ ಪಾವತಿ ಮಾಡದೇ ಇದ್ದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಸಂಘಟನೆ ಪ್ರಮುಖರು ಎಚ್ಚರಿಸಿದರು.</p>.<p>ರೈತ ಸಂಘದ ಗೌರವಧ್ಯಕ್ಷ ವೈಜನಾಥ ವಡ್ಡೆ, ಕಾರ್ಯದರ್ಶಿ ವಿಠ್ಠಲರಾವ ಪಾಟೀಲ, ರಾಮೇಶ್ವರ ಶಿವಣಕರ, ಮನೋಜ ಪೊಲೀಸ್ ಪಾಟೀಲ, ಧನರಾಜ ಭವರಾ, ವಿಜಯಕುಮಾರ ಪ್ರಭುರಾವ, ರಾಜಕುಮಾರ ವಡಗಾಂವೆ, ನೀಲಾಂಬಿಕಾದೇವಿ ಗಳಗೆ, ಉಮಾಕಾಂತ ಬಚ್ಚಣ್ಣಾ ಸೇರಿದಂತೆ ಇನ್ನಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-33-1833668909</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>