<p><strong>ಬೀದರ್:</strong> ಬೆಂಗಳೂರಿನ ಕನಕ ಆಫೀಸರ್ಸ್ ಅಕಾಡೆಮಿ ವತಿಯಿಂದ ಕೊಡಲಾಗುವ ‘ಕನಕ ಚೇತನ’ ಪ್ರಶಸ್ತಿಗೆ ಜಿಲ್ಲೆಯ ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಬಿರಾದಾರ (ಪರಿಹಾರ) ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಪತ್ರಿಕಾ ರಂಗಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ಪ್ರಶಸ್ತಿ ಒಲಿದು ಬಂದಿದೆ.</p>.<p>ಬೆಂಗಳೂರಿನ ಚಂದ್ರಾ ಲೇಔಟ್ನ ಕನಕ ಭವನದಲ್ಲಿ ಜೂನ್ 3 ರಂದು ನಡೆಯಲಿರುವ ಸಮಾರಂಭದಲ್ಲಿ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಿದೆ.</p>.<p>ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗೊಂಡ(ಕುರುಬ) ಸಮಾಜದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಹಾಗೂ ಯುಪಿಎಸ್ಸಿ ಸಾಧಕರಿಗೆ ಸತ್ಕಾರ ಜರುಗಲಿದೆ. ಮುಖ್ಯಮಂತ್ರಿ, ಸಚಿವರು, ಮಠಾಧೀಶರು ಹಾಗೂ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p>ನಾಲ್ಕು ದಶಕಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಮಲ್ಲಿಕಾರ್ಜುನ ಬಿರಾದಾರ ಅವರಿಗೆ ಕರ್ನಾಟಕ ರಾಜ್ಯೋತ್ಸವ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ, ಸನ್ಮಾನಗಳು ಸಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬೆಂಗಳೂರಿನ ಕನಕ ಆಫೀಸರ್ಸ್ ಅಕಾಡೆಮಿ ವತಿಯಿಂದ ಕೊಡಲಾಗುವ ‘ಕನಕ ಚೇತನ’ ಪ್ರಶಸ್ತಿಗೆ ಜಿಲ್ಲೆಯ ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಬಿರಾದಾರ (ಪರಿಹಾರ) ಅವರನ್ನು ಆಯ್ಕೆ ಮಾಡಲಾಗಿದೆ.</p>.<p>ಪತ್ರಿಕಾ ರಂಗಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ಪ್ರಶಸ್ತಿ ಒಲಿದು ಬಂದಿದೆ.</p>.<p>ಬೆಂಗಳೂರಿನ ಚಂದ್ರಾ ಲೇಔಟ್ನ ಕನಕ ಭವನದಲ್ಲಿ ಜೂನ್ 3 ರಂದು ನಡೆಯಲಿರುವ ಸಮಾರಂಭದಲ್ಲಿ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಿದೆ.</p>.<p>ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗೊಂಡ(ಕುರುಬ) ಸಮಾಜದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಹಾಗೂ ಯುಪಿಎಸ್ಸಿ ಸಾಧಕರಿಗೆ ಸತ್ಕಾರ ಜರುಗಲಿದೆ. ಮುಖ್ಯಮಂತ್ರಿ, ಸಚಿವರು, ಮಠಾಧೀಶರು ಹಾಗೂ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p>ನಾಲ್ಕು ದಶಕಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಮಲ್ಲಿಕಾರ್ಜುನ ಬಿರಾದಾರ ಅವರಿಗೆ ಕರ್ನಾಟಕ ರಾಜ್ಯೋತ್ಸವ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ, ಸನ್ಮಾನಗಳು ಸಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>