<p>ಬೀದರ್: ಕನ್ನಡ ಭವನದ ₹ 4 ಕೋಟಿ ಬಾಕಿ ಅನುದಾನ ಬಿಡುಗಡೆ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಒತ್ತಾಯಿಸಿದೆ.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹಾಗೂ ಗೌರವ ಕಾರ್ಯದರ್ಶಿ ಬಸವರಾಜ ಬಲ್ಲೂರ ಅವರು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ ಅವರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಸಲ್ಲಿಸಿದರು.</p>.<p>ಭವನದ ಮೊದಲ ಹಂತದ ಕಾಮಗಾರಿ ತೀವ್ರಗತಿಯಲ್ಲಿ ಸಾಗಿದ್ದು, ಕೊನೆಯ ಹಂತದಲ್ಲಿದೆ. ಈಗಾಗಲೇ ಜಿಲ್ಲಾ ಆಡಳಿತ ಸಂಬಂಧಪಟ್ಟ ಇಲಾಖೆಗೆ ಅನುದಾನ ಬಳಕೆ ಪ್ರಮಾಣ ಪತ್ರ ಸಲ್ಲಿಸಿದೆ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಅವರ ಆಸಕ್ತಿ ಫಲವಾಗಿ ಕಾಮಗಾರಿ ತ್ವರಿತಗತಿಯಲ್ಲಿ ನಡೆದಿದೆ. ಕನ್ನಡ ಭವನವು ಸಭಾ ಭವನ, ಬಯಲು ರಂಗ ಮಂದಿರ, ಗ್ರಂಥಾಲಯ, ಕಲಾ ಗ್ಯಾಲರಿ, ರಂಗ ತಾಲೀಮು ಒಳಗೊಳ್ಳಲಿದೆ. ಮಾದರಿ ಭವನ ಆಗಲಿದೆ ಎಂದು ಹೇಳಿದರು.</p>.<p>ಭವನದಿಂದ ಸಾಂಸ್ಕೃತಿಕ, ಸಾಹಿತ್ತಿಕ ಹಾಗೂ ಕನ್ನಡಪರ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಕನ್ನಡ ಭವನದ ₹ 4 ಕೋಟಿ ಬಾಕಿ ಅನುದಾನ ಬಿಡುಗಡೆ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಒತ್ತಾಯಿಸಿದೆ.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಹಾಗೂ ಗೌರವ ಕಾರ್ಯದರ್ಶಿ ಬಸವರಾಜ ಬಲ್ಲೂರ ಅವರು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ ಅವರಿಗೆ ಬರೆದ ಮನವಿ ಪತ್ರವನ್ನು ನಗರದಲ್ಲಿ ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಸಲ್ಲಿಸಿದರು.</p>.<p>ಭವನದ ಮೊದಲ ಹಂತದ ಕಾಮಗಾರಿ ತೀವ್ರಗತಿಯಲ್ಲಿ ಸಾಗಿದ್ದು, ಕೊನೆಯ ಹಂತದಲ್ಲಿದೆ. ಈಗಾಗಲೇ ಜಿಲ್ಲಾ ಆಡಳಿತ ಸಂಬಂಧಪಟ್ಟ ಇಲಾಖೆಗೆ ಅನುದಾನ ಬಳಕೆ ಪ್ರಮಾಣ ಪತ್ರ ಸಲ್ಲಿಸಿದೆ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಅವರ ಆಸಕ್ತಿ ಫಲವಾಗಿ ಕಾಮಗಾರಿ ತ್ವರಿತಗತಿಯಲ್ಲಿ ನಡೆದಿದೆ. ಕನ್ನಡ ಭವನವು ಸಭಾ ಭವನ, ಬಯಲು ರಂಗ ಮಂದಿರ, ಗ್ರಂಥಾಲಯ, ಕಲಾ ಗ್ಯಾಲರಿ, ರಂಗ ತಾಲೀಮು ಒಳಗೊಳ್ಳಲಿದೆ. ಮಾದರಿ ಭವನ ಆಗಲಿದೆ ಎಂದು ಹೇಳಿದರು.</p>.<p>ಭವನದಿಂದ ಸಾಂಸ್ಕೃತಿಕ, ಸಾಹಿತ್ತಿಕ ಹಾಗೂ ಕನ್ನಡಪರ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗಲಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>