ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ ಮಾತನಾಡಿ, ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಕನ್ನಡ ಭಾಷೆಯ ನಾಮಫಲಕಕ್ಕೆ ಪ್ರಥಮಾದ್ಯತೆ ನೀಡಲು ಆದೇಶಿಸಲಾಗಿದೆ. ತಪ್ಪಿದಲ್ಲಿ ಸೂಕ್ತ ಕ್ರಮ ಕೈಗೊಂಡು ಕಾನೂನು ರೀತಿ ದಂಡ ವಿಧಿಸಲಾಗುವುದು ಎಂದು ಹೇಳಿದರು. ಪಿಎಸ್ಐ ಯಶೋಧಾ ಕಟಕಿ, ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ, ಪುರಸಭೆ ಸದಸ್ಯರಾದ ಪಾಂಡುರಂಗ ಕನಸೆ, ಓಂಕಾರ ಮೋರೆ, ಎಂಪಿಎಂ ಅಧಿಕಾರಿಗಳಾದ ಬೀರಲಿಂಗ ಹಿರಿಯರಕರ್, ಸುಭಾಷ, ಜಯರಾಜ ದಾಬಶೆಟ್ಟಿ ಉಪಸ್ಥಿತರಿದ್ದರು.