<p><strong>ಔರಾದ್</strong>: ‘ಗಡಿಭಾಗದಲ್ಲಿ ನಾವು ಕನ್ನಡ ಮಾತನಾಡಿ, ಇತರ ಭಾಷಿಕರಿಗೆ ಕನ್ನಡ ಕಲಿಸಬೇಕಾಗಿದೆ’ ಎಂದು ಸಾಹಿತಿ ಮಾಣಿಕ ನೇಳಗೆ ಹೇಳಿದರು.</p>.<p>ತಾಲ್ಲೂಕಿನ ಹೊಕ್ರಾಣಾ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಕರುನಾಡು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದ್ವೇಷದಿಂದ ಭಾಷೆ ಬೆಳೆಯುವುದಿಲ್ಲ. ಪರಸ್ಪರ ಪ್ರೀತಿಯಿಂದ ಭಾಷೆಯನ್ನು ಬೆಳೆಸಬೇಕು. ಅನ್ಯಭಾಷಿಕರು ಕಂಡಾಗ ಅವರೊಂದಿಗೆ ಕನ್ನಡದಲ್ಲಿ ಮಾತನಾಡಿ, ಅವರು ಕನ್ನಡ ಕಲಿಯುವಂತೆ ಪ್ರೇರಣೆ ನೀಡಬೇಕು. ಪ್ರತಿ ಮನ-ಮನೆಗಳಲ್ಲಿ ಕನ್ನಡದ ದೀಪ ಹಚ್ಚುವ ಕೆಲಸ ಆಗಬೇಕು’ ಎಂದು ಹೇಳಿದರು.</p>.<p>ಸಾರಿಗೆ ಸಂಸ್ಥೆ ಅಧಿಕಾರಿ ಅಣ್ಣಾರಾವ ಧೂಳಗುಂಡೆ ಮಾತನಾಡಿ, ‘ಕನ್ನಡ ಕೇವಲ ಭಾಷೆಯಲ್ಲ, ಅದು ಬದುಕು. ವಿದ್ಯಾರ್ಥಿಗಳು ಕನ್ನಡ ಕಲಿಯುವಿಕೆಯಿಂದ ಬದುಕು ಭದ್ರವಾಗುತ್ತದೆ. ಬದುಕಲು ಎಲ್ಲ ಭಾಷೆಗಳು ಬೇಕಿದ್ದರೂ ಕನ್ನಡಿಗರಿಗೆ ಉಸಿರು ನೀಡುವ ಭಾಷೆ ಮಾತ್ರ ಕನ್ನಡ’ ಎಂದು ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಬಾಲಾಜಿ ಅಮರವಾಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಂಡರಿ ಆಡೆ ಮಾತನಾಡಿದರು. ಮುಖ್ಯಶಿಕ್ಷಕ ಶಿವಾಜಿ ಸಿಗ್ರೆ, ರಾಜಕುಮಾರ ನಾಯ್ಕವಾಡೆ, ಅಶೋಕ ಶೆಂಬೆಳ್ಳಿ, ಅಮರಸ್ವಾಮಿ ಸ್ಥಾವರಮಠ, ವಿನೋದ ರಾಠೋಡ, ಆನಂದ ಪವಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ‘ಗಡಿಭಾಗದಲ್ಲಿ ನಾವು ಕನ್ನಡ ಮಾತನಾಡಿ, ಇತರ ಭಾಷಿಕರಿಗೆ ಕನ್ನಡ ಕಲಿಸಬೇಕಾಗಿದೆ’ ಎಂದು ಸಾಹಿತಿ ಮಾಣಿಕ ನೇಳಗೆ ಹೇಳಿದರು.</p>.<p>ತಾಲ್ಲೂಕಿನ ಹೊಕ್ರಾಣಾ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ತಾಲ್ಲೂಕು ಆಡಳಿತ ಆಯೋಜಿಸಿದ್ದ ಕರುನಾಡು ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ದ್ವೇಷದಿಂದ ಭಾಷೆ ಬೆಳೆಯುವುದಿಲ್ಲ. ಪರಸ್ಪರ ಪ್ರೀತಿಯಿಂದ ಭಾಷೆಯನ್ನು ಬೆಳೆಸಬೇಕು. ಅನ್ಯಭಾಷಿಕರು ಕಂಡಾಗ ಅವರೊಂದಿಗೆ ಕನ್ನಡದಲ್ಲಿ ಮಾತನಾಡಿ, ಅವರು ಕನ್ನಡ ಕಲಿಯುವಂತೆ ಪ್ರೇರಣೆ ನೀಡಬೇಕು. ಪ್ರತಿ ಮನ-ಮನೆಗಳಲ್ಲಿ ಕನ್ನಡದ ದೀಪ ಹಚ್ಚುವ ಕೆಲಸ ಆಗಬೇಕು’ ಎಂದು ಹೇಳಿದರು.</p>.<p>ಸಾರಿಗೆ ಸಂಸ್ಥೆ ಅಧಿಕಾರಿ ಅಣ್ಣಾರಾವ ಧೂಳಗುಂಡೆ ಮಾತನಾಡಿ, ‘ಕನ್ನಡ ಕೇವಲ ಭಾಷೆಯಲ್ಲ, ಅದು ಬದುಕು. ವಿದ್ಯಾರ್ಥಿಗಳು ಕನ್ನಡ ಕಲಿಯುವಿಕೆಯಿಂದ ಬದುಕು ಭದ್ರವಾಗುತ್ತದೆ. ಬದುಕಲು ಎಲ್ಲ ಭಾಷೆಗಳು ಬೇಕಿದ್ದರೂ ಕನ್ನಡಿಗರಿಗೆ ಉಸಿರು ನೀಡುವ ಭಾಷೆ ಮಾತ್ರ ಕನ್ನಡ’ ಎಂದು ತಿಳಿಸಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಬಾಲಾಜಿ ಅಮರವಾಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಂಡರಿ ಆಡೆ ಮಾತನಾಡಿದರು. ಮುಖ್ಯಶಿಕ್ಷಕ ಶಿವಾಜಿ ಸಿಗ್ರೆ, ರಾಜಕುಮಾರ ನಾಯ್ಕವಾಡೆ, ಅಶೋಕ ಶೆಂಬೆಳ್ಳಿ, ಅಮರಸ್ವಾಮಿ ಸ್ಥಾವರಮಠ, ವಿನೋದ ರಾಠೋಡ, ಆನಂದ ಪವಾರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>