ಜಯಂತಿಗಳು ಹಾಗೂ ಇತರೆ ಕಾರ್ಯಕ್ರಮಗಳಿಗೆ ಜನಪ್ರತಿನಿಧಿಗಳು ಕಡ್ಡಾಯವಾಗಿ ಪಾಲ್ಗೊಳ್ಳುತ್ತಾರೆ. ದೊಡ್ಡ ದೊಡ್ಡ ಬ್ಯಾನರ್ ಹಾಕಿಕೊಳ್ಳುತ್ತಾರೆ. ಆದರೆ ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಕನ್ನಡ ರಾಜ್ಯೋತ್ಸವಕ್ಕೆ ಅಸಡ್ಡೆ ತೋರಿಸುವುದು ಸರಿಯಲ್ಲ. ಗಡಿಭಾಗದ ಕನ್ನಡಿಗರು ಈ ವಿಷಯದಲ್ಲಿ ಜಾಗೃತರಾಗಿ ಚುನಾವಣೆ ವೇಳೆ ಅಂತವರಿಗೆ ತಕ್ಕ ಪಾಠ ಕಲಿಸಬೇಕು. ಕನ್ನಡ ನಾಡು ನುಡಿ ಬಗ್ಗೆ ಪ್ರಾಮಾಣಿಕ ಕಾಳಜಿ ಇರುವವರಿಗೆ ಮತ ಹಾಕಬೇಕು’ ಎಂದು ಹೇಳಿದರು.