<p><strong>ಬೀದರ್: </strong>ವಾಸವಿ ಕನ್ಯಕಾ ಪರಮೇಶ್ವರಿ ಜಯಂತಿಯನ್ನು ನಗರದಲ್ಲಿ ಮಂಗಳವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.<br />ನಗರದ ಚೌಬಾರಾ ಸಮೀಪದ ಕನ್ಯಕಾ ಪರಮೇಶ್ವರಿ ಮಂದಿರದಲ್ಲಿ ದಿನವಿಡೀ ಶ್ರದ್ಧಾ ಭಕ್ತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಬೆಳಿಗ್ಗೆ ಅಭಿಷೇಕ, ಕುಂಕುಮಾರ್ಚನೆ, ಪುಷ್ಪಾರ್ಚನೆ, ಮಧ್ಯಾಹ್ನ ತೊಟ್ಟಿಲು, ಲಲಿತ ಸಹಸ್ರನಾಮ ಪಾರಾಯಣ, ಮಹಾ ಪ್ರಸಾದ, ಸಂಜೆ ಶೋಭಾಯಾತ್ರೆ ಜರುಗಿದವು.</p>.<p>ಮಂದಿರದಿಂದ ಆರಂಭಗೊಂಡ ಶೋಭಾಯಾತ್ರೆಯು ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಮುಖ್ಯ ರಸ್ತೆ, ವಿನಾಯಕ ವೃತ್ತ, ಚೌಬಾರಾ ಮಾರ್ಗವಾಗಿ ಹಾಯ್ದು ಪುನಃ ಮಂದಿರಕ್ಕೆ ತಲುಪಿ ಮುಕ್ತಾಯಗೊಂಡಿತು.<br />ಅಲಂಕೃತ ರಥದಲ್ಲಿ ವಾಸವಿ ಕನ್ಯಕಾ ಪರಮೇಶ್ವರಿ ಭಾವಚಿತ್ರ ಇಡಲಾಗಿತ್ತು.</p>.<p>ಮಹಿಳೆಯರು, ಯುವತಿಯರು ಕೆಂಪು ಬಣ್ಣದ ಸೀರೆ, ಪುರುಷರು ಬಿಳಿ ಬಣ್ಣದ ವಸ್ತ್ರ ಧರಿಸಿ ಗಮನ ಸೆಳೆದರು.</p>.<p>ಆರ್ಯ ವೈಶ್ಯ ಸಂಘದ ಅಧ್ಯಕ್ಷ ಡಿ.ವಿ. ಸಿಂದೋಲ, ಉಪಾಧ್ಯಕ್ಷ ದಿಗಂಬರ ಪೋಲಾ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೋಲಾ, ಚಂದ್ರಶೇಖರ ಗಾದಾ, ವೆಂಕಟೇಶ ಬೋರಾಳಕರ್, ಸುನೀಲ ವೆಂಗಪಲ್ಲಿ, ದತ್ತಾತ್ರಿ ದಾಚೆಪಲ್ಲಿ, ಕೃಷ್ಣಮೂರ್ತಿ, ಶ್ರೀನಿವಾಸ ಗಾದಗಿ ಮೊದಲಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ವಾಸವಿ ಕನ್ಯಕಾ ಪರಮೇಶ್ವರಿ ಜಯಂತಿಯನ್ನು ನಗರದಲ್ಲಿ ಮಂಗಳವಾರ ಸಂಭ್ರಮ, ಸಡಗರದಿಂದ ಆಚರಿಸಲಾಯಿತು.<br />ನಗರದ ಚೌಬಾರಾ ಸಮೀಪದ ಕನ್ಯಕಾ ಪರಮೇಶ್ವರಿ ಮಂದಿರದಲ್ಲಿ ದಿನವಿಡೀ ಶ್ರದ್ಧಾ ಭಕ್ತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಬೆಳಿಗ್ಗೆ ಅಭಿಷೇಕ, ಕುಂಕುಮಾರ್ಚನೆ, ಪುಷ್ಪಾರ್ಚನೆ, ಮಧ್ಯಾಹ್ನ ತೊಟ್ಟಿಲು, ಲಲಿತ ಸಹಸ್ರನಾಮ ಪಾರಾಯಣ, ಮಹಾ ಪ್ರಸಾದ, ಸಂಜೆ ಶೋಭಾಯಾತ್ರೆ ಜರುಗಿದವು.</p>.<p>ಮಂದಿರದಿಂದ ಆರಂಭಗೊಂಡ ಶೋಭಾಯಾತ್ರೆಯು ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಮುಖ್ಯ ರಸ್ತೆ, ವಿನಾಯಕ ವೃತ್ತ, ಚೌಬಾರಾ ಮಾರ್ಗವಾಗಿ ಹಾಯ್ದು ಪುನಃ ಮಂದಿರಕ್ಕೆ ತಲುಪಿ ಮುಕ್ತಾಯಗೊಂಡಿತು.<br />ಅಲಂಕೃತ ರಥದಲ್ಲಿ ವಾಸವಿ ಕನ್ಯಕಾ ಪರಮೇಶ್ವರಿ ಭಾವಚಿತ್ರ ಇಡಲಾಗಿತ್ತು.</p>.<p>ಮಹಿಳೆಯರು, ಯುವತಿಯರು ಕೆಂಪು ಬಣ್ಣದ ಸೀರೆ, ಪುರುಷರು ಬಿಳಿ ಬಣ್ಣದ ವಸ್ತ್ರ ಧರಿಸಿ ಗಮನ ಸೆಳೆದರು.</p>.<p>ಆರ್ಯ ವೈಶ್ಯ ಸಂಘದ ಅಧ್ಯಕ್ಷ ಡಿ.ವಿ. ಸಿಂದೋಲ, ಉಪಾಧ್ಯಕ್ಷ ದಿಗಂಬರ ಪೋಲಾ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೋಲಾ, ಚಂದ್ರಶೇಖರ ಗಾದಾ, ವೆಂಕಟೇಶ ಬೋರಾಳಕರ್, ಸುನೀಲ ವೆಂಗಪಲ್ಲಿ, ದತ್ತಾತ್ರಿ ದಾಚೆಪಲ್ಲಿ, ಕೃಷ್ಣಮೂರ್ತಿ, ಶ್ರೀನಿವಾಸ ಗಾದಗಿ ಮೊದಲಾದವರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>