ಕಣ್ಣೇಗಾಲ, ಸಿಂಗನಪುರ, ಆಲೂರು ಹೊಮ್ಮ, ಕೆಂಪನಪುರ ಗ್ರಾಮದ ರೋಗಿಗಳು ದೂರದ ಚಾಮರಾಜನಗರ ಹಾಗೂ ಯಳಂದೂರು ಪಟ್ಟಣಕ್ಕೆ ತೆರಳಿ ಚಿಕಿತ್ಸೆ ಪಡೆಯಬೇಕಾಗಿದೆ. ಆಗಾಗ್ಗೆ ವೈದ್ಯಾಧಿಕಾರಿಗಳು ಈ ಉಪ ಕೇಂದ್ರಕ್ಕೆ ಭೇಟಿ ನೀಡಬೇಕು. ಆದರೆ ಇದುವರೆಗೂ ಇತ್ತ ತಿರುಗಿ ನೋಡಿಲ್ಲ. ಜಿಲ್ಲಾ ಆರೋಗ್ಯ ಇಲಾಖೆಯವರಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.