<p>ಬೀದರ್: ಐದು ದಶಕಗಳಿಂದ ಅನ್ಯಾಯಕ್ಕೆ ಒಳಗಾಗಿರುವ ಕಾರಂಜಾ ಯೋಜನೆ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ಕಲ್ಪಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಕಾರಂಜಾ ಸಂತ್ರಸ್ತರು ಒಕ್ಕೊರಲಿನಿಂದ ಒತ್ತಾಯಿಸಿದರು.</p>.<p>ಇಲ್ಲಿನ ಪೂಜ್ಯ ಚೆನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಹಕ್ಕೊತ್ತಾಯ ಮಂಡಿಸಿದರು.</p>.<p>ಕಾರಂಜಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಇರುವ ಸುಮಾರು 1,200 ಎಕರೆ ಹೆಚ್ಚುವರಿ ಜಮೀನನ್ನು ಇನ್ನೂ ಸ್ವಾಧೀನಪಡಿಸಿಕೊಳ್ಳಲಾಗಿಲ್ಲ. ಈ ಜಮೀನಿನಲ್ಲಿ ಮಳೆ ನೀರು ನಿಲ್ಲಲು ಆರಂಭವಾಗಿದೆ. ಬೆಳೆ ಬೆಳೆಯಲು ಆಗುತ್ತಿಲ್ಲ. ಕಾರಂಜಾ ಯೋಜನೆಯಲ್ಲಿ ಸ್ವಾಧೀನಪಡಿಸಿಕೊಳ್ಳದ ಹೆಚ್ಚುವರಿ ಜಮೀನು ಜಲಾವೃತ್ತವಾಗಿರುವ ಕಾರಣ ರೈತರಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.</p>.<p>ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇರುವ ಅತ್ಯಲ್ಪ ಜಮೀನಿನಲ್ಲೂ ನೀರು ಸಂಗ್ರಹವಾಗಿರುವುದರಿಂದ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಕೇವಲ ಭರವಸೆ ನೀಡುತ್ತಿವೆ ಹೊರತು ಪರಿಹಾರ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಭಾಲ್ಕಿ ಶಾಸಕ ಈಶ್ವರ ಖಂಡ್ರೆ, ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ್, ಬೀದರ್ ಶಾಸಕ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಡಾ.ಶೈಲೇಂದ್ರ ಬೆಲ್ದಾಳೆ, ಮಾಜಿ ಶಾಸಕ ಅಶೋಕ ಖೇಣಿ, ಮಾತನಾಡಿದರು.</p>.<p>ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೂಚಕನಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಗೌರವಾಧ್ಯಕ್ಷ ರಾಜಪ್ಪ ಶಂಕ್ರಪ್ಪ ಕಮಲಾಪುರೆ, ಮಲ್ಲಿಕಾರ್ಜುನ ಮುತ್ತಣ್ಣ, ನಿರ್ದೇಶಕ ವೀರಭದ್ರಪ್ಪ ಉಪ್ಪಿನ್, ವಿರೂಪಾಕ್ಷ ಗಾದಗಿ, ಸಂಜಯ ಡಾಕುಳಗಿ, ರಾಜಕುಮಾರ ಚಿಲ್ಲರ್ಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಐದು ದಶಕಗಳಿಂದ ಅನ್ಯಾಯಕ್ಕೆ ಒಳಗಾಗಿರುವ ಕಾರಂಜಾ ಯೋಜನೆ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ಕಲ್ಪಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಕಾರಂಜಾ ಸಂತ್ರಸ್ತರು ಒಕ್ಕೊರಲಿನಿಂದ ಒತ್ತಾಯಿಸಿದರು.</p>.<p>ಇಲ್ಲಿನ ಪೂಜ್ಯ ಚೆನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರದಲ್ಲಿ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಹಕ್ಕೊತ್ತಾಯ ಮಂಡಿಸಿದರು.</p>.<p>ಕಾರಂಜಾ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಇರುವ ಸುಮಾರು 1,200 ಎಕರೆ ಹೆಚ್ಚುವರಿ ಜಮೀನನ್ನು ಇನ್ನೂ ಸ್ವಾಧೀನಪಡಿಸಿಕೊಳ್ಳಲಾಗಿಲ್ಲ. ಈ ಜಮೀನಿನಲ್ಲಿ ಮಳೆ ನೀರು ನಿಲ್ಲಲು ಆರಂಭವಾಗಿದೆ. ಬೆಳೆ ಬೆಳೆಯಲು ಆಗುತ್ತಿಲ್ಲ. ಕಾರಂಜಾ ಯೋಜನೆಯಲ್ಲಿ ಸ್ವಾಧೀನಪಡಿಸಿಕೊಳ್ಳದ ಹೆಚ್ಚುವರಿ ಜಮೀನು ಜಲಾವೃತ್ತವಾಗಿರುವ ಕಾರಣ ರೈತರಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.</p>.<p>ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇರುವ ಅತ್ಯಲ್ಪ ಜಮೀನಿನಲ್ಲೂ ನೀರು ಸಂಗ್ರಹವಾಗಿರುವುದರಿಂದ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳು ಕೇವಲ ಭರವಸೆ ನೀಡುತ್ತಿವೆ ಹೊರತು ಪರಿಹಾರ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಭಾಲ್ಕಿ ಶಾಸಕ ಈಶ್ವರ ಖಂಡ್ರೆ, ಬೀದರ್ ದಕ್ಷಿಣ ಶಾಸಕ ಬಂಡೆಪ್ಪ ಕಾಶೆಂಪೂರ್, ಬೀದರ್ ಶಾಸಕ ರಹೀಂ ಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಡಾ.ಶೈಲೇಂದ್ರ ಬೆಲ್ದಾಳೆ, ಮಾಜಿ ಶಾಸಕ ಅಶೋಕ ಖೇಣಿ, ಮಾತನಾಡಿದರು.</p>.<p>ಸಮಿತಿಯ ಅಧ್ಯಕ್ಷ ಚಂದ್ರಶೇಖರ ಪಾಟೀಲ ಹೂಚಕನಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಗೌರವಾಧ್ಯಕ್ಷ ರಾಜಪ್ಪ ಶಂಕ್ರಪ್ಪ ಕಮಲಾಪುರೆ, ಮಲ್ಲಿಕಾರ್ಜುನ ಮುತ್ತಣ್ಣ, ನಿರ್ದೇಶಕ ವೀರಭದ್ರಪ್ಪ ಉಪ್ಪಿನ್, ವಿರೂಪಾಕ್ಷ ಗಾದಗಿ, ಸಂಜಯ ಡಾಕುಳಗಿ, ರಾಜಕುಮಾರ ಚಿಲ್ಲರ್ಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>