<p><strong>ಚಿಟಗುಪ್ಪ</strong>: ತಾಲ್ಲೂಕಿನ ವಿಠಲಪುರವನ್ನು ಕಂದಾಯ ಗ್ರಾಮವನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಜಿಯಾವುಲ್ಲ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.</p>.<p>ಕರವೇ ಪದಾಧಿಕಾರಿ ಮನೋಜ ಸಿತಾಳೆ ಮಾತನಾಡಿ,‘ವಿಠಲಪುರ ಗ್ರಾಮ ಹೋಬಳಿ ಕೇಂದ್ರ ಬೇಮಳಖೇಡಾದಿಂದ ಸುಮಾರು 6 ಕಿ.ಮೀ ದೂರದಲ್ಲಿದೆ. ಪ್ರತಿದಿನ ಸರ್ಕಾರಿ ಕೆಲಸಗಳಿಗೆ ಗ್ರಾಮಸ್ಥರು ಅಲ್ಲಿಗೆ ಹೋಗಬೇಕು. ಬಸ್ ಇಲ್ಲ. ನಡೆದುಕೊಂಡೇ ಹೋಗಬೇಕು.ಇದರಿಂದ ಸಮಸ್ಯೆ ಉಂಟಾಗುತ್ತಿದೆ. ಸದ್ಯ ವಿಠಲಪುರ ಗ್ರಾಮದ ಜನಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಅದನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಬೇಕು’ ಎಂದು ತಿಳಿಸಿದರು.</p>.<p>ವಿಠಲಪುರವನ್ನು ಪಕ್ಕದ ಚಾಂಗಲೇರಾ, ಮಿನಕೇರಾ ಗ್ರಾಮ ಪಂಚಾಯಿತಿಗಳಿಗೆ ಒಳಪಡಿಸಿದಲ್ಲಿ ಗ್ರಾಮಸ್ಥರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.</p>.<p>ಮಹೇಶ ಮಲಗಿ, ಸಚಿನ್ ಹಾರ್ಗೆ, ಜಗನ್ನಾಥ ಕಪ್ಪರಗಾಂವ್, ವಿಜಯಕುಮಾರ್ ಯಾದವ, ಪಾಂಡು ಯಾದವ, ಹಣಮಂತ ಬುರ್ಜಿನ್ ಹಾಗೂ ವೆಂಕಟ ಯಾದವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ</strong>: ತಾಲ್ಲೂಕಿನ ವಿಠಲಪುರವನ್ನು ಕಂದಾಯ ಗ್ರಾಮವನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಜಿಯಾವುಲ್ಲ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.</p>.<p>ಕರವೇ ಪದಾಧಿಕಾರಿ ಮನೋಜ ಸಿತಾಳೆ ಮಾತನಾಡಿ,‘ವಿಠಲಪುರ ಗ್ರಾಮ ಹೋಬಳಿ ಕೇಂದ್ರ ಬೇಮಳಖೇಡಾದಿಂದ ಸುಮಾರು 6 ಕಿ.ಮೀ ದೂರದಲ್ಲಿದೆ. ಪ್ರತಿದಿನ ಸರ್ಕಾರಿ ಕೆಲಸಗಳಿಗೆ ಗ್ರಾಮಸ್ಥರು ಅಲ್ಲಿಗೆ ಹೋಗಬೇಕು. ಬಸ್ ಇಲ್ಲ. ನಡೆದುಕೊಂಡೇ ಹೋಗಬೇಕು.ಇದರಿಂದ ಸಮಸ್ಯೆ ಉಂಟಾಗುತ್ತಿದೆ. ಸದ್ಯ ವಿಠಲಪುರ ಗ್ರಾಮದ ಜನಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಅದನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಬೇಕು’ ಎಂದು ತಿಳಿಸಿದರು.</p>.<p>ವಿಠಲಪುರವನ್ನು ಪಕ್ಕದ ಚಾಂಗಲೇರಾ, ಮಿನಕೇರಾ ಗ್ರಾಮ ಪಂಚಾಯಿತಿಗಳಿಗೆ ಒಳಪಡಿಸಿದಲ್ಲಿ ಗ್ರಾಮಸ್ಥರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.</p>.<p>ಮಹೇಶ ಮಲಗಿ, ಸಚಿನ್ ಹಾರ್ಗೆ, ಜಗನ್ನಾಥ ಕಪ್ಪರಗಾಂವ್, ವಿಜಯಕುಮಾರ್ ಯಾದವ, ಪಾಂಡು ಯಾದವ, ಹಣಮಂತ ಬುರ್ಜಿನ್ ಹಾಗೂ ವೆಂಕಟ ಯಾದವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>