ಡೊಳ್ಳು, ಹಲಗೆ, ಬಾಜಾ ಭಜಂತ್ರಿ, ವಾದ್ಯ ಮೇಳಗಳು ಪಾದಯಾತ್ರೆಯಲ್ಲಿ ಸದ್ದು ಮಾಡಿದವು. ಪಾದಯಾತ್ರೆ ಓಲ್ಡ್ ಸಿಟಿ, ಅಂಬೇಡ್ಕರ್ ವೃತ್ತ, ಭಗತ್ಸಿಂಗ್ ವೃತ್ತದ ಮಾರ್ಗವಾಗಿ ಸಾಗಿ ತಹಶೀಲ್ದಾರ್ ಕಚೇರಿ ಬಂದು ಮುಕ್ತಾಯಗೊಂಡಿತು. ಬಂಡೆಪ್ಪ ಕಾಶೆಂಪುರ ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಬೀದರ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ, ಪ್ರಮುಖರಾದ ಕಿರಣ ಚಂದಾ, ರಾಜು ಕಡ್ಯಾಳ್ ಇದ್ದರು.