ಡಾ.ನಂಜುಂಡಪ್ಪ ವರದಿಯ ಪ್ರಕಾರ ಬೀದರ್ ಅತ್ಯಂತ ಹಿಂದುಳಿದ ಜಿಲ್ಲೆಯ ಪಟ್ಟಿಯಲ್ಲಿ ಗುರುತಿಸಿಕೊಂಡಿದೆ. ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ, ಔರಾದ್ ತಾಲ್ಲೂಕಿನಲ್ಲಿ 2.50 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಸೋಲಾರ್ ಪಾರ್ಕ್ ಸ್ಥಾಪಿಸಲು ಉದ್ದೇಶಿಸಿದೆ. ಅದಕ್ಕೆ 15 ಸಾವಿರ ಎಕರೆ ಭೂಮಿ ಅಗತ್ಯವಿದೆ. ಲೀಸ್ ಮೇಲೆ ರೈತರ ಭೂಮಿ ಪಡೆಯಲು ಹೆಚ್ಚಿನ ಮೊತ್ತವನ್ನು ನಿಗದಿ ಮಾಡಬೇಕು ಎಂದು ಕೋರಿದರು.