<p><strong>ಬೀದರ್:</strong> ಎರಡನೇ ದಿನವೂ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ವಾತಾವರಣ ಸಂಪೂರ್ಣ ತಂಪಾಗಿದೆ. ಇದೇ ವೇಳೆ ಮಳೆ ಅವಾಂತರವೂ ಸೃಷ್ಟಿಸಿದೆ. ಔರಾದ್ ತಾಲ್ಲೂಕಿನಲ್ಲಿ ಶುಕ್ರವಾರ ತಡ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿ ಕೆಲವೆಡೆ ಹಾನಿ ಸಂಭವಿಸಿದೆ.</p>.<p>ರಾಯಪಳ್ಳಿ ಗ್ರಾಮದ ಶೈಲು ರಾಮಲು (36) ಬಿರುಗಾಳಿಗೆ ಮಾಳಿಗೆ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಧೂಪತಮಹಾಗಾಂವ್ ಗ್ರಾಮದಲ್ಲಿ ಸಿಡಿಲು ಬಡಿದು ರಾಮಣ್ಣ ಪ್ರಭು ಕಾಳೆ ಅವರ ಒಂದು ಎತ್ತು ಸಾವನ್ನಪ್ಪಿದರೆ ಮತ್ತೊಂದು ಎತ್ತು ತೀವ್ರ ಗಾಯಗೊಂಡಿದೆ.</p><p>ಮಳೆ ಗಾಳಿಯಿಂದಾಗಿ ಕೆಲ ಗ್ರಾಮಗಳಲ್ಲಿ ತಗಡಿನ ಶೀಟ್ಗಳು ಹಾರಿ ಹೋಗಿವೆ. ಕಂಬಗಳು ಬಿದ್ದು ವಿದ್ಯುತ್ ಕಡಿತವಾಗಿರುವ ಮಾಹಿತಿ ಇದೆ. ಜೆಸ್ಕಾಂ ಹಾಗೂ ಕಂದಾಯ ನಿರೀಕ್ಷಕರಿಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.</p><p>ತಾಲ್ಲೂಕಿನ ಔರಾದ್ ಹೋಬಳಿಯಲ್ಲಿ 30 ಮಿಮಿ ಚಿಂತಾಕಿ-49,2 ಮಿಮಿ. ಸಂತಪುರ-20.4 ಮಿಮಿ. ದಾಬಕಾ, 38.3 ಮಿಮಿ ಮಳೆ ದಾಖಲಾಗಿದೆ.</p><p>ಕಮಲನಗರದ ಮದನೂರ, ಖತಗಾಂವ ಸುತ್ತಮುತ್ತ ಬಿರುಗಾಳಿ ಮಳೆಗೆ ಮನೆಗಳ ಶೀಟುಗಳು ಹಾರಿ ಹೋಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಾವು ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಹಲವೆಡೆ ಬುಡಸಮೇತ ಮರಗಳು ನೆಲಕ್ಕುರುಳಿವೆ. </p><p>ಬೀದರ್ ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಶುಕ್ರವಾರ ತಡರಾತ್ರಿ ವರೆಗೆ ಮಳೆಯಾಗಿದೆ. ಶನಿವಾರ ಪುನಃ ಮಳೆ ಆರಂಭಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹುಲಸೂರ, ಹುಮನಾಬಾದ್, ಬಸವಕಲ್ಯಾಣದಲ್ಲೂ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಎರಡನೇ ದಿನವೂ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ವಾತಾವರಣ ಸಂಪೂರ್ಣ ತಂಪಾಗಿದೆ. ಇದೇ ವೇಳೆ ಮಳೆ ಅವಾಂತರವೂ ಸೃಷ್ಟಿಸಿದೆ. ಔರಾದ್ ತಾಲ್ಲೂಕಿನಲ್ಲಿ ಶುಕ್ರವಾರ ತಡ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿ ಕೆಲವೆಡೆ ಹಾನಿ ಸಂಭವಿಸಿದೆ.</p>.<p>ರಾಯಪಳ್ಳಿ ಗ್ರಾಮದ ಶೈಲು ರಾಮಲು (36) ಬಿರುಗಾಳಿಗೆ ಮಾಳಿಗೆ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಧೂಪತಮಹಾಗಾಂವ್ ಗ್ರಾಮದಲ್ಲಿ ಸಿಡಿಲು ಬಡಿದು ರಾಮಣ್ಣ ಪ್ರಭು ಕಾಳೆ ಅವರ ಒಂದು ಎತ್ತು ಸಾವನ್ನಪ್ಪಿದರೆ ಮತ್ತೊಂದು ಎತ್ತು ತೀವ್ರ ಗಾಯಗೊಂಡಿದೆ.</p><p>ಮಳೆ ಗಾಳಿಯಿಂದಾಗಿ ಕೆಲ ಗ್ರಾಮಗಳಲ್ಲಿ ತಗಡಿನ ಶೀಟ್ಗಳು ಹಾರಿ ಹೋಗಿವೆ. ಕಂಬಗಳು ಬಿದ್ದು ವಿದ್ಯುತ್ ಕಡಿತವಾಗಿರುವ ಮಾಹಿತಿ ಇದೆ. ಜೆಸ್ಕಾಂ ಹಾಗೂ ಕಂದಾಯ ನಿರೀಕ್ಷಕರಿಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ.</p><p>ತಾಲ್ಲೂಕಿನ ಔರಾದ್ ಹೋಬಳಿಯಲ್ಲಿ 30 ಮಿಮಿ ಚಿಂತಾಕಿ-49,2 ಮಿಮಿ. ಸಂತಪುರ-20.4 ಮಿಮಿ. ದಾಬಕಾ, 38.3 ಮಿಮಿ ಮಳೆ ದಾಖಲಾಗಿದೆ.</p><p>ಕಮಲನಗರದ ಮದನೂರ, ಖತಗಾಂವ ಸುತ್ತಮುತ್ತ ಬಿರುಗಾಳಿ ಮಳೆಗೆ ಮನೆಗಳ ಶೀಟುಗಳು ಹಾರಿ ಹೋಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಾವು ಸೇರಿದಂತೆ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ. ಹಲವೆಡೆ ಬುಡಸಮೇತ ಮರಗಳು ನೆಲಕ್ಕುರುಳಿವೆ. </p><p>ಬೀದರ್ ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಶುಕ್ರವಾರ ತಡರಾತ್ರಿ ವರೆಗೆ ಮಳೆಯಾಗಿದೆ. ಶನಿವಾರ ಪುನಃ ಮಳೆ ಆರಂಭಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹುಲಸೂರ, ಹುಮನಾಬಾದ್, ಬಸವಕಲ್ಯಾಣದಲ್ಲೂ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>