<p><strong>ತಡಪಳ್ಳಿ(ಜನವಾಡ):</strong> ಬೀದರ್ ತಾಲ್ಲೂಕಿನ ತಡಪಳ್ಳಿ ಗ್ರಾಮದ ಬಡ ರೈತ ಭಾಸ್ಕರ್ ರೆಡ್ಡಿ ಅವರ ಪುತ್ರಿ ಪ್ರವಾಲಿಕಾ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೀದರ್ ತಾಲ್ಲೂಕಿಗೆ ಟಾಪರ್ ಆಗಿ ಹೊರ ಹೊಮ್ಮುವ ಮೂಲಕ ಗಮನ ಸೆಳೆದಿದ್ದಾರೆ.</p>.<p>ಬಗದಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿರುವ ಪ್ರವಾಲಿಕಾ, ಶೇ 99.2 ರಷ್ಟು ಅಂಕ ಗಳಿಸಿದ್ದಾರೆ.</p>.<p>ಕನ್ನಡದಲ್ಲಿ 125, ಹಿಂದಿ 100, ಗಣಿತ 100, ವಿಜ್ಞಾನ 99, ಸಮಾಜ ವಿಜ್ಞಾನ 98 ಹಾಗೂ ಇಂಗ್ಲಿಷ್ನಲ್ಲಿ 98 ಅಂಕ ಪಡೆದಿದ್ದಾರೆ.</p>.<p>‘ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದರಿಂದ ಅತೀವ ಸಂತಸವಾಗಿದೆ. ಪಾಲಕರು, ಶಿಕ್ಷಕರ ಪ್ರೋತ್ಸಾಹ ಹಾಗೂ ಕಠಿಣ ಪರಿಶ್ರಮದಿಂದ ಪರೀಕ್ಷೆಯಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ’ ಎಂದು ಪ್ರವಾಲಿಕಾ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>‘ವಸತಿ ನಿಲಯದಲ್ಲಿ ಇದ್ದ ಕಾರಣ ಸಂಪೂರ್ಣ ಮೊಬೈಲ್ನಿಂದ ದೂರವಿದ್ದೆ. ಓದಿನಲ್ಲಿ ಏಕಾಗ್ರತೆ ಕಾಯ್ದುಕೊಂಡಿದ್ದೆ’ ಎಂದು ತಿಳಿಸಿದರು.</p>.<p>‘ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರವೇಶ ಪಡೆಯಲಿದ್ದೇನೆ. ಮುಂದೆ ಐಎಎಸ್ ಆಗುವ ಗುರಿ ಇಟ್ಟುಕೊಂಡಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಡಪಳ್ಳಿ(ಜನವಾಡ):</strong> ಬೀದರ್ ತಾಲ್ಲೂಕಿನ ತಡಪಳ್ಳಿ ಗ್ರಾಮದ ಬಡ ರೈತ ಭಾಸ್ಕರ್ ರೆಡ್ಡಿ ಅವರ ಪುತ್ರಿ ಪ್ರವಾಲಿಕಾ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೀದರ್ ತಾಲ್ಲೂಕಿಗೆ ಟಾಪರ್ ಆಗಿ ಹೊರ ಹೊಮ್ಮುವ ಮೂಲಕ ಗಮನ ಸೆಳೆದಿದ್ದಾರೆ.</p>.<p>ಬಗದಲ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯಾಗಿರುವ ಪ್ರವಾಲಿಕಾ, ಶೇ 99.2 ರಷ್ಟು ಅಂಕ ಗಳಿಸಿದ್ದಾರೆ.</p>.<p>ಕನ್ನಡದಲ್ಲಿ 125, ಹಿಂದಿ 100, ಗಣಿತ 100, ವಿಜ್ಞಾನ 99, ಸಮಾಜ ವಿಜ್ಞಾನ 98 ಹಾಗೂ ಇಂಗ್ಲಿಷ್ನಲ್ಲಿ 98 ಅಂಕ ಪಡೆದಿದ್ದಾರೆ.</p>.<p>‘ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದರಿಂದ ಅತೀವ ಸಂತಸವಾಗಿದೆ. ಪಾಲಕರು, ಶಿಕ್ಷಕರ ಪ್ರೋತ್ಸಾಹ ಹಾಗೂ ಕಠಿಣ ಪರಿಶ್ರಮದಿಂದ ಪರೀಕ್ಷೆಯಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ’ ಎಂದು ಪ್ರವಾಲಿಕಾ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>‘ವಸತಿ ನಿಲಯದಲ್ಲಿ ಇದ್ದ ಕಾರಣ ಸಂಪೂರ್ಣ ಮೊಬೈಲ್ನಿಂದ ದೂರವಿದ್ದೆ. ಓದಿನಲ್ಲಿ ಏಕಾಗ್ರತೆ ಕಾಯ್ದುಕೊಂಡಿದ್ದೆ’ ಎಂದು ತಿಳಿಸಿದರು.</p>.<p>‘ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರವೇಶ ಪಡೆಯಲಿದ್ದೇನೆ. ಮುಂದೆ ಐಎಎಸ್ ಆಗುವ ಗುರಿ ಇಟ್ಟುಕೊಂಡಿದ್ದೇನೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>