ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ ಮಾತನಾಡಿ, ‘ಕೋವಿಡ್ ಸಂಕಷ್ಟದಲ್ಲಿ ಪಂಚಾಯಿತಿ ನೌಕರರು ತಮ್ಮ ಪ್ರಾಣದ ಹಂಗು ತೊರೆದು, ಗ್ರಾಮ ಮಟ್ಟದಲ್ಲಿ ಸ್ಚಚ್ಛತೆ ಹಾಗೂ ಸೋಂಕಿನ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಲ್ಲಿನ ಶ್ರಮ ಅಪಾರವಾಗಿದೆ. ಸೋಂಕು ಸಂಪೂರ್ಣವಾಗಿ ಇನ್ನೂ ನಾಶವಾಗಿಲ್ಲ. ಹಾಗಾಗಿ, ಸಾರ್ವಜನಿಕರು ನಿರ್ಲಕ್ಷ್ಯ ತೋರಬಾರದು’ ಎಂದು ಮನವಿ ಮಾಡಿದರು.