ವಿಶ್ವ ಶಾಂತಿಗಾಗಿ ಕಾರ್ತೀಕ ದೀಪೋತ್ಸವ 13ಕ್ಕೆ
ಬೀದರ್: ವಿಶ್ವಶಾಂತಿ ಹಾಗೂ ಲೋಕ ಕಲ್ಯಾಣಕ್ಕಾಗಿ ಭಾಲ್ಕಿ ರಸ್ತೆಯ ಸಮೀಪದಲ್ಲಿರುವ ಜ್ಞಾನ ಶಿವಯೋಗಾಶ್ರಮದಲ್ಲಿ ಕಾರ್ತೀಕ ದೀಪೋತ್ಸವ ಡಿ.13ರಂದು ಸಂಜೆ 4 ಗಂಟೆಗೆ ನಡೆಯಲಿದೆ.
ಶ್ರೀಶೈಲದ ಅಕ್ಕಮಹಾದೇವಿ ಚೈತನ್ಯ ಪೀಠದ ಅಧಿಪತಿ ಕರುಣಾದೇವಿ ಮಾತಾ ಸಾನಿಧ್ಯ ವಹಿಸುವರು. ಬೇಮಳಖೇಡ ಹಿರೇಮಠದ ರಾಜಶೇಖರ ಶಿವಾಚಾರ್ಯರು ನೇತೃತ್ವ ವಹಿಸುವರು.
ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಕೋವಿಡ್ ನಿಯಮಗಳನ್ನು ಪಾಲಿಸಿ ಸುಖ, ಶಾಂತಿ, ಸಮೃದ್ಧಿಗಾಗಿ ಹಣತೆಗಳನ್ನು ತಂದು ಕಾರ್ತೀಕ ದೀಪಗಳನ್ನು ಬೆಳಗಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಕಾಶೀನಾಥ ಶಂಭು ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.