<p><strong>ಬೀದರ್: </strong>ಇಲ್ಲಿಯ ಹಿರಿಯ ಉದ್ಯಮಿ ಕಾಶಪ್ಪ ಧನ್ನೂರ ಅವರಿಗೆ ಕೂಡಲಸಂಗಮ ಬಸವ ಧರ್ಮ ಪೀಠದಿಂದ ಕೊಡಲಾಗುವ ಪ್ರಸಕ್ತ ಸಾಲಿನ ಕಾಯಕ ರತ್ನ ಪ್ರಶಸ್ತಿ ದೊರೆತಿದೆ.</p>.<p>ಬಸವಾದಿ ಶರಣರ ಕಾಯಕ ಹಾಗೂ ದಾಸೋಹ ತತ್ವವನ್ನು ಪಾಲಿಸಿಕೊಂಡು ಬಂದಿರುವುದನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಮೂಲತಃ ಭಾಲ್ಕಿ ತಾಲ್ಲೂಕಿನ ಧನ್ನೂರ(ಎಚ್) ಗ್ರಾಮದವರಾದ ಕಾಶಪ್ಪ ಧನ್ನೂರ, ಸರಳ, ಸಜ್ಜನಿಕೆಗೆ ಹೆಸರಾಗಿದ್ದಾರೆ. ಐದು ದಶಕಗಳಿಂದ ಬಸವ ತತ್ವವನ್ನು ಅನುಸರಿಸಿಕೊಂಡು ಬಂದಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಇದ್ದಾರೆ.</p>.<p>ಗಾಂಧಿಗಂಜ್ನ ಪ್ರತಿಷ್ಠಿತ ದಿ. ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಹಾಗೂ ಗಾಂಧಿಗಂಜ್ನ ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿದ್ದಾರೆ.</p>.<p><strong>ಪ್ರಶಸ್ತಿ ಪ್ರದಾನ:</strong> ಕೂಡಲಸಂಗಮದಲ್ಲಿ ನಡೆದ 33ನೇ ಶರಣ ಮೇಳದಲ್ಲಿ ಬಸವ ಧರ್ಮ ಪೀಠಾಧ್ಯಕ್ಷೆ ಡಾ.ಗಂಗಾದೇವಿ ಅವರು ಕಾಶಪ್ಪ ಧನ್ನೂರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಬಸವ ಧರ್ಮ ಪೀಠದ ಉತ್ತರಾಧಿಕಾರಿ ಮಹಾದೇಶ್ವರ ಸ್ವಾಮೀಜಿ, ಸಿದ್ಧರಾಮೇಶ್ವರ ಸ್ವಾಮೀಜಿ, ಧಾರವಾಡ ಪೀಠದ ಮಾತೆ ಜ್ಞಾನೇಶ್ವರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಇಲ್ಲಿಯ ಹಿರಿಯ ಉದ್ಯಮಿ ಕಾಶಪ್ಪ ಧನ್ನೂರ ಅವರಿಗೆ ಕೂಡಲಸಂಗಮ ಬಸವ ಧರ್ಮ ಪೀಠದಿಂದ ಕೊಡಲಾಗುವ ಪ್ರಸಕ್ತ ಸಾಲಿನ ಕಾಯಕ ರತ್ನ ಪ್ರಶಸ್ತಿ ದೊರೆತಿದೆ.</p>.<p>ಬಸವಾದಿ ಶರಣರ ಕಾಯಕ ಹಾಗೂ ದಾಸೋಹ ತತ್ವವನ್ನು ಪಾಲಿಸಿಕೊಂಡು ಬಂದಿರುವುದನ್ನು ಪರಿಗಣಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.</p>.<p>ಮೂಲತಃ ಭಾಲ್ಕಿ ತಾಲ್ಲೂಕಿನ ಧನ್ನೂರ(ಎಚ್) ಗ್ರಾಮದವರಾದ ಕಾಶಪ್ಪ ಧನ್ನೂರ, ಸರಳ, ಸಜ್ಜನಿಕೆಗೆ ಹೆಸರಾಗಿದ್ದಾರೆ. ಐದು ದಶಕಗಳಿಂದ ಬಸವ ತತ್ವವನ್ನು ಅನುಸರಿಸಿಕೊಂಡು ಬಂದಿದ್ದಾರೆ. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ಇದ್ದಾರೆ.</p>.<p>ಗಾಂಧಿಗಂಜ್ನ ಪ್ರತಿಷ್ಠಿತ ದಿ. ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಹಾಗೂ ಗಾಂಧಿಗಂಜ್ನ ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿದ್ದಾರೆ.</p>.<p><strong>ಪ್ರಶಸ್ತಿ ಪ್ರದಾನ:</strong> ಕೂಡಲಸಂಗಮದಲ್ಲಿ ನಡೆದ 33ನೇ ಶರಣ ಮೇಳದಲ್ಲಿ ಬಸವ ಧರ್ಮ ಪೀಠಾಧ್ಯಕ್ಷೆ ಡಾ.ಗಂಗಾದೇವಿ ಅವರು ಕಾಶಪ್ಪ ಧನ್ನೂರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p>ಬಸವ ಧರ್ಮ ಪೀಠದ ಉತ್ತರಾಧಿಕಾರಿ ಮಹಾದೇಶ್ವರ ಸ್ವಾಮೀಜಿ, ಸಿದ್ಧರಾಮೇಶ್ವರ ಸ್ವಾಮೀಜಿ, ಧಾರವಾಡ ಪೀಠದ ಮಾತೆ ಜ್ಞಾನೇಶ್ವರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>