ಬೀದರ್: 2020-21ನೇ ಸಾಲಿಗೆ ನಗರಸಭೆ ಆಸ್ತಿ ತೆರಿಗೆ ಹೆಚ್ಚಿಸಿರುವುದನ್ನು ಹಿಂಪಡೆಯಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ ಹಾಗೂ ಕಾರ್ಯದರ್ಶಿ ವೀರೇಂದ್ರ ಶಾಸ್ತ್ರಿ ಆಗ್ರಹಿಸಿದ್ದಾರೆ.
ಈ ಕುರಿತು ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಆಸ್ತಿ, ಸ್ವಂತ ವಸತಿ, ನಿವೇಶನ ಹಾಗೂ ಸ್ವಂತ ಕಟ್ಟಡಗಳಿಗೆ ಸಂಬಂಧಿಸಿದಂತೆ 2019-20ನೇ ಸಾಲಿನ ತೆರಿಗೆಯನ್ನೇ ಮುಂದುವರಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.
ತೆರಿಗೆ ಪಾವತಿಸಲು ಆರು ತಿಂಗಳ ಬಡ್ಡಿ ರಹಿತ ಕಾಲಾವಕಾಶ ನೀಡಬೇಕು. ನಗರಸಭೆಯಿಂದ ನೀಡುವ ಹೊಸ ಅನುಮತಿ ಹಾಗೂ ನವೀಕರಣ ಶುಲ್ಕದಲ್ಲಿ ಶೇ 50 ರಷ್ಟು ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.