‘ನನ್ನ ಬಗ್ಗೆ ಅವ್ಯವಹಾರ, ಅಕ್ರಮ ಎಂದು ಹೇಳುತ್ತಿದ್ದಾರೆ. ನಿಮ್ಮ ನಾಯಕರು ಬ್ರಹ್ಮಾಂಡ ಭ್ರಷ್ಟಾಚಾರ ಮಾಡುತ್ತಿದ್ದಾರೆ. ರಾಜ್ಯದ ಗುತ್ತಿಗೆದಾರರ ಸಂಘದ ಅಧ್ಯಕ್ಷ ರಾಜ್ಯದಲ್ಲಿ ಶೇ 40 ರಷ್ಟು ಕಮಿಷನ್ ನಡೆಯುತ್ತಿರುವ ಬಗ್ಗೆ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ತಾನು ಭ್ರಷ್ಟಾಚಾರಿ, ತನ್ನ ನಾಯಕರೆಲ್ಲ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದರಿಂದ ಖೂಬಾ ಅವರಿಗೆ ಇತರರೂ ಹಾಗೆಯೇ ಕಾಣುತ್ತಾರೆ’ ಎಂದು ಟೀಕಿಸಿದರು.