ದಸರಾ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೆಲ ಕಿಡಿಗೇಡಿ ಯುವಕರು ಗವಾನ್ ದರ್ಗಾಗೆ ನುಗ್ಗಿ ಕುಂಕುಮ ಹಚ್ಚಿ ಪೂಜೆ ಮಾಡಿ ಘೋಷಣೆ ಕೂಗಿರುವುದು ಸರಿಯಲ್ಲ. ಸರ್ಕಾರ ಈ ರೀತಿಯ ಚಟುವಟಿಕೆಗಳಿಗೆ ಪ್ರತ್ಯಕ್ಷವಾಗಿಯಾಗಲಿ, ಪರೋಕ್ಷವಾಗಿಯಾಗಲಿ ಬೆಂಬಲ ನೀಡುವುದು ಸೂಕ್ತವಲ್ಲ. ಶಾಂತಿ ಕದಡುವ ಪ್ರಯತ್ನ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.