ಬಸವ ಭಕ್ತರಿಗೆ 60 ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಸಂಸತ್ತಿನ ಪರಿಕಲ್ಪನೆ ಕೊಟ್ಟಿದ್ದೇ ಬಸವಣ್ಣನವರು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದಾದ್ಯಂತ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಎಂದಾದರೂ ಬಸವಣ್ಣವರ ಬಗ್ಗೆ ಒಂದು ಮಾತನ್ನಾದರೂ ಆಡಿದ್ದಾರಾ, ಅವರಿಗೆ ಮೊದಲು ಬಸವಣ್ಣವರ ವಚನ ಸರಿಯಾಗಿ ಉಚ್ಚರಿಸಲು ಹೇಳಿಕೊಡಬೇಕು ಎಂದು ತಿಳಿಸಿದ್ದಾರೆ.