ಬಸವಕಲ್ಯಾಣ: ನಗರದ ಮುಂಡ್ಯಾಪಾಳಿ ಹನುಮಾನ ದೇವರಗುಡ್ಡದ ದೇವಸ್ಥಾನದಲ್ಲಿ ಶನಿವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಮತ್ತು ಸಂಕೀರ್ತನೆ ನಡೆಯಿತು.
ಬಜರಂಗ ದಳದ ತಾಲ್ಲೂಕು ಸಂಯೋಜಕ ರವಿ ನಾವದ್ಗೇಕರ್ ನೇತೃತ್ವದಲ್ಲಿ ಹನುಮ ಮಾಲಾಧಾರಣೆ ಕಾರ್ಯಕ್ರಮ ನಡೆಯಿತು.
ವಿಶ್ವ ಹಿಂದೂ ಪರಿಷತ್ತಿನ ಕಲಬುರಗಿ ವಿಭಾಗೀಯ ಕಾರ್ಯದರ್ಶಿ ಅಂಬರೀಶ ಸೂಲೆಗಾವೆ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ನೌಬಾದೆ, ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಶೈಲ್ ವಾತಡೆ, ಪ್ರಮುಖರಾದ ರವಿ ಸಕಟ, ಕಮಲಜೀತ್ ಹಾಗೂ ರಮೇಶ ಹಿರೇಮಠ ಪಾಲ್ಗೊಂಡಿದ್ದರು.
ರಾತ್ರಿ ದೀಪೋತ್ಸವ ಆಯೋಜಿಸಲಾಗಿತ್ತು. ಪ್ರಸಾದ ವಿತರಿಸಲಾಯಿತು. ಮಹಿಳೆಯರು ಮಕ್ಕಳಾದಿಯಾಗಿ 300 ಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ವಿವಿಧ ಪಕ್ಷಗಳ ಮುಖಂಡರು, ಗಣ್ಯರು ಸಹ ಭೇಟಿ ನೀಡಿ ದರ್ಶನ ಪಡೆದರು.