‘ಮಲ್ಲಿಕಾರ್ಜುನ ಖರ್ಗೆಯವರನ್ನು ಅದ್ದೂರಿಯಾಗಿ ಸನ್ಮಾನಿಸಿದರೆ ನಮಗೆ ಸಂತಸ. ಆದರೆ ಈಶ್ವರ ಖಂಡ್ರೆ ತಮ್ಮ ಬೇಳೆ ಬೇಯಿಸಿಕೊಳ್ಳಲು ದಿ.ವೈಜನಾಥ ಪಾಟೀಲರ ಶ್ರಮವನ್ನು ಮಲ್ಲಿಕಾರ್ಜುನ ಖರ್ಗೆ, ಧರಂಸಿಂಗ್ ಅವರಿಗೆ ನೀಡುತ್ತಿರುವುದು ಸರಿಯಲ್ಲ. ಸಮಾಜಕ್ಕೆ ತಪ್ಪು ಸಂದೇಶ ನೀಡಲು ಹೊರಟಿದ್ದಾರೆ. ಖಂಡ್ರೆಯವರು, ಸುಖಾ ಸುಮ್ಮನೆ ಮಲ್ಲಿಕಾರ್ಜುನ ಖರ್ಗೆಯವರಿಗೆ ಸನ್ಮಾನದ ಬದಲಿಗೆ ಅಪಮಾನ ಮಾಡಲು ಹೊರಟಿದ್ದಾರೆ’ ಎಂದು ಆರೋಪಿಸಿದ್ದಾರೆ.