ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರು ಚೆಕ್ಪೋಸ್ಟ್ಗೆ ತೆರಳಿ ಕಗ್ಗತ್ತಲಲ್ಲಿ ಕೆಲಸ ಮಾಡುತ್ತಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿ ಕ್ಷೇಮ ವಿಚಾರಿಸಿದರೆ, ಬೀದರ್ ಶಾಸಕ ರಹೀಂ ಖಾನ್ ಅವರು ಕಡು ಬಡವರಿಗೆ ಮೂರು ವಾರಗಳಿಗೆ ಬೇಕಾಗುವಷ್ಟು ಆಹಾರ ಧಾನ್ಯ ಪೂರೈಕೆ ಮಾಡಿ ಮಾನವೀಯತೆ ಮೆರೆಯುತ್ತಿದ್ದಾರೆ.
ಸಂಸದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಜನರ ಸಮಸ್ಯೆಗಳಿಗೆ ಸ್ಪಂದಿಸದೆ ಮನೆಯಲ್ಲಿ ಉಳಿದುಕೊಂಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ತೀವ್ರ ಮುಜುಗರಕ್ಕೆ ಒಳಗಾಗಿದ್ದರು. ಸೋಮವಾರ ಸಂಸದ ಹಾಗೂ ಸಚಿವರು ಮನೆಯಿಂದ ಹೊರ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸಿದರು.