<p><strong>ಚಿಟಗುಪ್ಪ (ಹುಮನಾಬಾದ್):</strong> ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಎರಡನೇ ಬಾರಿ ಭೂಮಿ ಪೂಜೆ ಕಾರ್ಯಕ್ರಮ ಸೋಮವಾರ ಜರುಗಿತು.</p>.<p>ತಾಲ್ಲೂಕಿನ ತಾಳಮಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಪ್ಪರಗಿ ಕ್ರಾಸ್ ಹತ್ತಿರದ ಸರ್ವೇ 50ರ (3) ಜಮೀನಲ್ಲಿ ಕಟ್ಟಡದ ಶಂಕುಸ್ಥಾಪನೆ ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿತ್ತು. ಅದರಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಜಮಾಯಿಸಿದರು. ಈ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಗೊಂದಲ ಸೃಷ್ಟಿಯಾಗಿ ಗಲಾಟೆ ಆಗಬಹುದು ಎಂಬ ಮುನ್ನೆಚ್ಚರಿಕೆಯಿಂದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟೆ ಅವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಮಧ್ಯಾಹ್ನ ಸುಮಾರು 12 ಗಂಟೆ 26 ನಿಮಿಷಕ್ಕೆ ಆಗಮಿಸಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಭೂಮಿ ಪೂಜೆ ಸ್ಥಳದ ಕಡೆಗೆ ಆಗಮಿಸದಂತೆ ದೂರದಲ್ಲಿಯೇ ತಡೆದರು.</p>.<p>ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ , ‘ಬಡವರು ಮತ್ತು ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಕಲ್ಯಾಣ ಕರ್ನಾಟಕದ ಸುಮಾರು 16 ಕೋಟಿ 72 ಲಕ್ಷ ರೂಪಾಯಿಗಳ ಅನುದಾನದಲ್ಲಿ ಈ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಾಣ ಮಾಡಲಾಗುತ್ತಿದೆ. ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಅನೇಕ ಕಳಪೆ ಕಾಮಗಾರಿ ಮಾಡಿದ್ದಾರೆ ಎಂಬ ಆರೋಪಗಳು ಇವೆ. ಹೀಗಾಗಿ ಈ ವಸತಿ ಶಾಲೆಯ ಕಟ್ಟಡ ಗುಣಮಟ್ಟದಿಂದ ಕೂಡಿರಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಡಾ ಚಂದ್ರಶೇಖರ ಪಾಟೀಲ ಮಾತನಾಡಿ, ‘ಶಿಷ್ಟಾಚಾರ ಉಲಘಂನೆ ಮಾಡಿ ಈ ಕಾಮಗಾರಿಗೆ ಈಚೆಗೆ ಶಾಸಕ ಡಾ ಸಿದ್ದಲಿಂಗಪ್ಪ ಪಾಟೀಲ ಅವರು ಚಾಲನೆ ನೀಡಿದ್ದರು. ಇದು ಯಾವುದು ಹೊಸದಲ್ಲ. ಪ್ರತಿಯೊಂದು ಕಾಮಗಾರಿ ಸಭೆ ಸಮಾರಂಭಗಳಲ್ಲಿ ಶಿಷ್ಟಾಚಾರ ಪದೇ ಪದೇ ಉಲ್ಲಂಘನೆ ಆಗುತ್ತಿದೆ. ಈ ಬಗ್ಗೆ ನೀವು ಸರಿಯಾಗಿ ಪರಿಶೀಲನೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ತಿಳಿಸಿದರು. </p>.<p>‘ಈ ವಸತಿ ಶಾಲೆಯ ಕಟ್ಟಡ ನಿರ್ಮಾಣದ ಗುತ್ತಿಗೆದಾರ ಘಾಟಬೋಳಾರ್ ಮತ್ತು ದುಬಲಗುಂಡಿ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಮಾಡಿದ್ದಾರೆ. ಈ ಗ್ರಾಮಗಳಿಗೆ ಭೇಟಿ ಪರಿಶೀಲನೆ ನಡೆಸೋಣ. ಇಲ್ಲದಿದ್ದರೆ ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಯೋಗೇಶ್, ಜಿ.ಪಂ ಮಾಜಿ ಸದಸ್ಯ ರಾಜಶೇಖರ ಪಾಟೀಲ ಮದರಗಾಂವ, ಶ್ರೀಮಂತ ಪಾಟೀಲ, ಅಫ್ಸರಮಿಯ್ಯಾ, ಓಂಕಾರ ತುಂಬಾ, ಉಮೇಶ್ ಜಮಗಿ, ಶ್ರೀನಾಥ ದೇವಣಿ ಸೇರಿದಂತೆ ಇತರರು ಇದ್ದರು.</p>.<h2>ಸಚಿವರ ಕಾರು ತಡೆದು ಪ್ರಶ್ನಿಸಿದ ಶಾಸಕರ ಬೆಂಬಲಿಗರು </h2>.<p>ವಸತಿ ಶಾಲೆಯ ಶಂಕುಸ್ಥಾಪನೆ ಈಚೆಗೆ ಶಾಸಕರಿಂದ ನಡೆದಿದೆ ಮತ್ತೊಮ್ಮೆ ಏಕೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವರ ಕಾರು ತಡೆದು ತೀವ್ರ ವಿರೋಧ ವ್ಯಕ್ತಪಡಿಸಿದರು. ಶಾಸಕರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಬೇಕು ಆದರೆ ಅವರಿಗೂ ಸಹ ಮಾಹಿತಿ ನೀಡದೆ ನೀವು ಹೇಗೆ ಚಾಲನೆ ನೀಡುತ್ತಿರಿ ಎಂದು ಕಿಡಿಕಾರಿದರು.</p>.<p>ನಂತರ ಶಾಸಕ ಡಾ ಸಿದ್ದಲಿಂಗಪ್ಪ ಪಾಟೀಲ ಮಾತನಾಡಿ, ‘ಈ ವಸತಿ ಶಾಲೆಯ ಕಟ್ಟಡದಲ್ಲಿ ನಾನು ಯಾವುದೇ ರಾಜಕೀಯ ಮಾಡುವುದಿಲ್ಲ. ಸಂವಿಧಾನದ ಮೇಲೆ ಪ್ರಮಾಣ ಮಾಡಿ ಹೇಳುತ್ತಿದ್ದೇನೆ. 7 ದಿನಗಳ ಮುಂಚಿತವಾಗಿಯೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಶಿಷ್ಟಾಚಾರದ ಪ್ರಕಾರವೇ ತಮ್ಮನ್ನು ಒಳಗೊಂಡು ಆಹ್ವಾನ ಮಾಡುವಂತೆ ಹೇಳಿದ್ದೆ. ಆದರೆ ನೀವು ಬರದ ಕಾರಣ ನಾನು ಚಾಲನೆ ನೀಡಿದ್ದೇನೆ’ ಎಂದರು.</p>.<p>‘ದೊಡ್ಡ ಕಾರ್ಯಕ್ರಮ ನಡೆಸಬೇಕು. ಅದಕ್ಕೆ ಸಚಿವರು ಶಂಕುಸ್ಥಾಪನೆ ಮಾಡಬೇಕು ಎಂದರೆ ಸಚಿವರು ನೀಡಿದ ದಿನಾಂಕದಂದು ಸ್ಥಳೀಯ ಶಾಸಕರು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಸಚಿವರು ಉತ್ತರಿಸಿ ತೆರಳುತ್ತಿದ್ದಾಗ ಶಾಸಕ ಮತ್ತು ಕಾರ್ಯಕರ್ತರು ಸಚಿವರ ಕಾರಿನ ಎದುರು ಧರಣಿ ಕೂತರು. ಪೊಲೀಸರು ಶಾಸಕ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.</p>.<h2>ಸಚಿವರ ನಡೆ ಖಂಡನೀಯ: ಶಾಸಕ </h2><p> ಹುಮನಾಬಾದ್: ‘ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಕಟ್ಟಡ ಕಾಮಗಾರಿಗೆ ನಾನು ಚಾಲನೆ ನೀಡಿದ್ದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಮತ್ತೊಮ್ಮೆ ಚಾಲನೆ ನೀಡಿರುವುದು ಖಂಡನೀಯವಾಗಿದೆ’ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಹೇಳಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಸಚಿವರು ಶಾಸಕರ ಹಕ್ಕು ಕಸಿದುಕೊಂಡಿದ್ದಾರೆ. ಸಂವಿಧಾನದ ಮತ್ತು ಕಾನೂನಿನ ವಿರುದ್ಧ ನಡೆದುಕೊಂಡಿದ್ದಾರೆ. ಫೆ .9ರಂದು ಸಚಿವರು ಮತ್ತು ಅಧಿಕಾರಿಗಳ ಗಮನಕ್ಕೆ ತಂದೇ ಕಾಮಗಾರಿಗೆ ಚಾಲನೆ ನೀಡಿದ್ದೆ ಎಂದರು. ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮದ ಅಧ್ಯಕ್ಷತೆ ನಾನು ವಹಿಸಬೇಕು. ಆದರೆ ಈ ಕಾರ್ಯಕ್ರಮದಲ್ಲಿ ಸಂಪೂರ್ಣ ಶಿಷ್ಟಾಚಾರ ಉಲ್ಲಂಘನೆ ನಡೆದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಹಕ್ಕು ಚ್ಯುತಿ ಮಂಡಿಸುತ್ತೇನೆ. ಅಲ್ಲದೇ ಸದನದಲ್ಲಿ ಪ್ರಶ್ನೆ ಮಾಡಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ ಎಂಬ ಕಾರಣಕ್ಕಾಗಿ ಪೊಲೀಸರನ್ನು ಬಳಸಿಕೊಂಡು ನನಗೆ ಸೇರಿದಂತೆ ನಮ್ಮ ಯಾವೊಬ್ಬ ಕಾರ್ಯಕರ್ತರನ್ನು ಕಾರ್ಯಕ್ರಮದ ಕಡೆಗೆ ಪ್ರವೇಶ ನೀಡದೆ ಕೆಲವರು ಮೇಲೆ ಲಾಠಿ ಪ್ರಹಾರ ಮಾಡಿಸಿದ್ದಾರೆ’ ಎಂದು ಕಿಡಿಕಾರಿದರು. ಈ ಸಂದರ್ಭದಲ್ಲಿ ಅನೀಲ ಪಸರಗಿ ಮಲ್ಲಿಕಾರ್ಜುನ ಪಾಟೀಲ ವಿಶ್ವನಾಥ ಪಾಟೀಲ ಗಜೇಂದ್ರ ಕನಕಟ್ಟನಾಗಭೂಷಣ್ ಸಂಗಮರವಿ ಹೊಸಳ್ಳಿ ಅರುಣ್ ಬಾವಗಿ ಗೌತಮ್ ಸೇಡೋಳ ಗೌತಮ್ ಪ್ರಸಾದ್ ಶಿವರಾಜ್ ಚಿನಕೇರಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ (ಹುಮನಾಬಾದ್):</strong> ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಎರಡನೇ ಬಾರಿ ಭೂಮಿ ಪೂಜೆ ಕಾರ್ಯಕ್ರಮ ಸೋಮವಾರ ಜರುಗಿತು.</p>.<p>ತಾಲ್ಲೂಕಿನ ತಾಳಮಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಪ್ಪರಗಿ ಕ್ರಾಸ್ ಹತ್ತಿರದ ಸರ್ವೇ 50ರ (3) ಜಮೀನಲ್ಲಿ ಕಟ್ಟಡದ ಶಂಕುಸ್ಥಾಪನೆ ಬೆಳಿಗ್ಗೆ 11 ಗಂಟೆಗೆ ನಿಗದಿಯಾಗಿತ್ತು. ಅದರಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಜಮಾಯಿಸಿದರು. ಈ ಎರಡೂ ಪಕ್ಷದ ಕಾರ್ಯಕರ್ತರ ನಡುವೆ ಗೊಂದಲ ಸೃಷ್ಟಿಯಾಗಿ ಗಲಾಟೆ ಆಗಬಹುದು ಎಂಬ ಮುನ್ನೆಚ್ಚರಿಕೆಯಿಂದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟೆ ಅವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಮಧ್ಯಾಹ್ನ ಸುಮಾರು 12 ಗಂಟೆ 26 ನಿಮಿಷಕ್ಕೆ ಆಗಮಿಸಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಭೂಮಿ ಪೂಜೆ ಸ್ಥಳದ ಕಡೆಗೆ ಆಗಮಿಸದಂತೆ ದೂರದಲ್ಲಿಯೇ ತಡೆದರು.</p>.<p>ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ , ‘ಬಡವರು ಮತ್ತು ಕಾರ್ಮಿಕರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಕಲ್ಯಾಣ ಕರ್ನಾಟಕದ ಸುಮಾರು 16 ಕೋಟಿ 72 ಲಕ್ಷ ರೂಪಾಯಿಗಳ ಅನುದಾನದಲ್ಲಿ ಈ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಾಣ ಮಾಡಲಾಗುತ್ತಿದೆ. ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಅನೇಕ ಕಳಪೆ ಕಾಮಗಾರಿ ಮಾಡಿದ್ದಾರೆ ಎಂಬ ಆರೋಪಗಳು ಇವೆ. ಹೀಗಾಗಿ ಈ ವಸತಿ ಶಾಲೆಯ ಕಟ್ಟಡ ಗುಣಮಟ್ಟದಿಂದ ಕೂಡಿರಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ಡಾ ಚಂದ್ರಶೇಖರ ಪಾಟೀಲ ಮಾತನಾಡಿ, ‘ಶಿಷ್ಟಾಚಾರ ಉಲಘಂನೆ ಮಾಡಿ ಈ ಕಾಮಗಾರಿಗೆ ಈಚೆಗೆ ಶಾಸಕ ಡಾ ಸಿದ್ದಲಿಂಗಪ್ಪ ಪಾಟೀಲ ಅವರು ಚಾಲನೆ ನೀಡಿದ್ದರು. ಇದು ಯಾವುದು ಹೊಸದಲ್ಲ. ಪ್ರತಿಯೊಂದು ಕಾಮಗಾರಿ ಸಭೆ ಸಮಾರಂಭಗಳಲ್ಲಿ ಶಿಷ್ಟಾಚಾರ ಪದೇ ಪದೇ ಉಲ್ಲಂಘನೆ ಆಗುತ್ತಿದೆ. ಈ ಬಗ್ಗೆ ನೀವು ಸರಿಯಾಗಿ ಪರಿಶೀಲನೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ತಿಳಿಸಿದರು. </p>.<p>‘ಈ ವಸತಿ ಶಾಲೆಯ ಕಟ್ಟಡ ನಿರ್ಮಾಣದ ಗುತ್ತಿಗೆದಾರ ಘಾಟಬೋಳಾರ್ ಮತ್ತು ದುಬಲಗುಂಡಿ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಸಂಪೂರ್ಣ ಕಳಪೆ ಮಾಡಿದ್ದಾರೆ. ಈ ಗ್ರಾಮಗಳಿಗೆ ಭೇಟಿ ಪರಿಶೀಲನೆ ನಡೆಸೋಣ. ಇಲ್ಲದಿದ್ದರೆ ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಚಿವರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಯೋಗೇಶ್, ಜಿ.ಪಂ ಮಾಜಿ ಸದಸ್ಯ ರಾಜಶೇಖರ ಪಾಟೀಲ ಮದರಗಾಂವ, ಶ್ರೀಮಂತ ಪಾಟೀಲ, ಅಫ್ಸರಮಿಯ್ಯಾ, ಓಂಕಾರ ತುಂಬಾ, ಉಮೇಶ್ ಜಮಗಿ, ಶ್ರೀನಾಥ ದೇವಣಿ ಸೇರಿದಂತೆ ಇತರರು ಇದ್ದರು.</p>.<h2>ಸಚಿವರ ಕಾರು ತಡೆದು ಪ್ರಶ್ನಿಸಿದ ಶಾಸಕರ ಬೆಂಬಲಿಗರು </h2>.<p>ವಸತಿ ಶಾಲೆಯ ಶಂಕುಸ್ಥಾಪನೆ ಈಚೆಗೆ ಶಾಸಕರಿಂದ ನಡೆದಿದೆ ಮತ್ತೊಮ್ಮೆ ಏಕೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವರ ಕಾರು ತಡೆದು ತೀವ್ರ ವಿರೋಧ ವ್ಯಕ್ತಪಡಿಸಿದರು. ಶಾಸಕರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಬೇಕು ಆದರೆ ಅವರಿಗೂ ಸಹ ಮಾಹಿತಿ ನೀಡದೆ ನೀವು ಹೇಗೆ ಚಾಲನೆ ನೀಡುತ್ತಿರಿ ಎಂದು ಕಿಡಿಕಾರಿದರು.</p>.<p>ನಂತರ ಶಾಸಕ ಡಾ ಸಿದ್ದಲಿಂಗಪ್ಪ ಪಾಟೀಲ ಮಾತನಾಡಿ, ‘ಈ ವಸತಿ ಶಾಲೆಯ ಕಟ್ಟಡದಲ್ಲಿ ನಾನು ಯಾವುದೇ ರಾಜಕೀಯ ಮಾಡುವುದಿಲ್ಲ. ಸಂವಿಧಾನದ ಮೇಲೆ ಪ್ರಮಾಣ ಮಾಡಿ ಹೇಳುತ್ತಿದ್ದೇನೆ. 7 ದಿನಗಳ ಮುಂಚಿತವಾಗಿಯೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಶಿಷ್ಟಾಚಾರದ ಪ್ರಕಾರವೇ ತಮ್ಮನ್ನು ಒಳಗೊಂಡು ಆಹ್ವಾನ ಮಾಡುವಂತೆ ಹೇಳಿದ್ದೆ. ಆದರೆ ನೀವು ಬರದ ಕಾರಣ ನಾನು ಚಾಲನೆ ನೀಡಿದ್ದೇನೆ’ ಎಂದರು.</p>.<p>‘ದೊಡ್ಡ ಕಾರ್ಯಕ್ರಮ ನಡೆಸಬೇಕು. ಅದಕ್ಕೆ ಸಚಿವರು ಶಂಕುಸ್ಥಾಪನೆ ಮಾಡಬೇಕು ಎಂದರೆ ಸಚಿವರು ನೀಡಿದ ದಿನಾಂಕದಂದು ಸ್ಥಳೀಯ ಶಾಸಕರು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಸಚಿವರು ಉತ್ತರಿಸಿ ತೆರಳುತ್ತಿದ್ದಾಗ ಶಾಸಕ ಮತ್ತು ಕಾರ್ಯಕರ್ತರು ಸಚಿವರ ಕಾರಿನ ಎದುರು ಧರಣಿ ಕೂತರು. ಪೊಲೀಸರು ಶಾಸಕ ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.</p>.<h2>ಸಚಿವರ ನಡೆ ಖಂಡನೀಯ: ಶಾಸಕ </h2><p> ಹುಮನಾಬಾದ್: ‘ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಕಟ್ಟಡ ಕಾಮಗಾರಿಗೆ ನಾನು ಚಾಲನೆ ನೀಡಿದ್ದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಮತ್ತೊಮ್ಮೆ ಚಾಲನೆ ನೀಡಿರುವುದು ಖಂಡನೀಯವಾಗಿದೆ’ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಹೇಳಿದರು. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಸಚಿವರು ಶಾಸಕರ ಹಕ್ಕು ಕಸಿದುಕೊಂಡಿದ್ದಾರೆ. ಸಂವಿಧಾನದ ಮತ್ತು ಕಾನೂನಿನ ವಿರುದ್ಧ ನಡೆದುಕೊಂಡಿದ್ದಾರೆ. ಫೆ .9ರಂದು ಸಚಿವರು ಮತ್ತು ಅಧಿಕಾರಿಗಳ ಗಮನಕ್ಕೆ ತಂದೇ ಕಾಮಗಾರಿಗೆ ಚಾಲನೆ ನೀಡಿದ್ದೆ ಎಂದರು. ಶಿಷ್ಟಾಚಾರದ ಪ್ರಕಾರ ಕಾರ್ಯಕ್ರಮದ ಅಧ್ಯಕ್ಷತೆ ನಾನು ವಹಿಸಬೇಕು. ಆದರೆ ಈ ಕಾರ್ಯಕ್ರಮದಲ್ಲಿ ಸಂಪೂರ್ಣ ಶಿಷ್ಟಾಚಾರ ಉಲ್ಲಂಘನೆ ನಡೆದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಹಕ್ಕು ಚ್ಯುತಿ ಮಂಡಿಸುತ್ತೇನೆ. ಅಲ್ಲದೇ ಸದನದಲ್ಲಿ ಪ್ರಶ್ನೆ ಮಾಡಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ ಎಂಬ ಕಾರಣಕ್ಕಾಗಿ ಪೊಲೀಸರನ್ನು ಬಳಸಿಕೊಂಡು ನನಗೆ ಸೇರಿದಂತೆ ನಮ್ಮ ಯಾವೊಬ್ಬ ಕಾರ್ಯಕರ್ತರನ್ನು ಕಾರ್ಯಕ್ರಮದ ಕಡೆಗೆ ಪ್ರವೇಶ ನೀಡದೆ ಕೆಲವರು ಮೇಲೆ ಲಾಠಿ ಪ್ರಹಾರ ಮಾಡಿಸಿದ್ದಾರೆ’ ಎಂದು ಕಿಡಿಕಾರಿದರು. ಈ ಸಂದರ್ಭದಲ್ಲಿ ಅನೀಲ ಪಸರಗಿ ಮಲ್ಲಿಕಾರ್ಜುನ ಪಾಟೀಲ ವಿಶ್ವನಾಥ ಪಾಟೀಲ ಗಜೇಂದ್ರ ಕನಕಟ್ಟನಾಗಭೂಷಣ್ ಸಂಗಮರವಿ ಹೊಸಳ್ಳಿ ಅರುಣ್ ಬಾವಗಿ ಗೌತಮ್ ಸೇಡೋಳ ಗೌತಮ್ ಪ್ರಸಾದ್ ಶಿವರಾಜ್ ಚಿನಕೇರಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>