ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ಅಸಂಘಟಿತ ಕಾರ್ಮಿಕರಿಗೆ ಪರಿಹಾರಧನ ತಿಳಿವಳಿಕೆ

Last Updated 15 ಜೂನ್ 2021, 13:20 IST
ಅಕ್ಷರ ಗಾತ್ರ

ಬೀದರ್‌: ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ನೀಡುತ್ತಿರುವ ಕೋವಿಡ್ ಪರಿಹಾರ ಧನದ ಬಗ್ಗೆ ಮಾಹಿತಿ ನೀಡಲಾಯಿತು.

ಕೆಎಸ್ಐಐಡಿಸಿ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ‘ರಾಜ್ಯ ಸರ್ಕಾರವು ಲಾಕ್‌ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಎಲ್ಲ ಕಾರ್ಮಿಕರಿಗೆ ನೇರವು ನೀಡುತ್ತಿದೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಪ್ರತಿಯೊಬ್ಬ ಕಾರ್ಮಿಕರಿಗೆ ಈ ಸಹಾಯಧನ ದೊರಕುವಂತಾಗಲು ಕಾರ್ಮಿಕರಿಗೆ ಯೋಜನೆಯ ಮಾಹಿತಿ ನೀಡಬೇಕು’ ಎಂದರು.

ಎಪಿಎಂಸಿ ಅಧ್ಯಕ್ಷ ವಿಜಯಕುಮಾರ ಆನಂದೆ, ಉಪಾಧ್ಯಕ್ಷ ಬಸವರಾಜ ಶರ್ಮಾ, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶಕುಮಾರ, ಬೀದರ್ ದಕ್ಷಿಣ ಮಂಡಲ ಅಧ್ಯಕ್ಷ ರಾಜರೆಡ್ಡಿ ಶಹಾಬಾದ್, ಜಗನ್ನಾಥ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT