<p>ಕೊಳಾರ(ಕೆ)(ಜನವಾಡ): ಪರಸ್ಪರ ಪ್ರೀತಿ, ವಿಶ್ವಾಸ, ಸೌಹಾರ್ದದ ಬದುಕಿಗಾಗಿ ಅವಿಭಕ್ತ ಕುಟುಂಬ ಸಂಸ್ಕೃತಿ ಬೆಳೆಯಬೇಕು ಎಂದು ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಹೇಳಿದರು.</p>.<p>ಬೀದರ್ ತಾಲ್ಲೂಕಿನ ಕೊಳಾರ(ಕೆ) ಗ್ರಾಮದಲ್ಲಿ ಸಾಯಿ ಬಾಬಾ ಮಂದಿರದ ಜಾತ್ರೆ ಪ್ರಯುಕ್ತ ಮಂಗಳವಾರ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಅವಿಭಕ್ತ ಕುಟುಂಬದಲ್ಲಿ ಮಕ್ಕಳಿಗೆ ಹಿರಿಯರ ಪ್ರೀತಿ, ಮಾರ್ಗದರ್ಶನ ಸಿಗುತ್ತದೆ. ಹೀಗಾಗಿ ಒಟ್ಟಿಗೆ ಜೀವನ ಸಾಗಿಸಿ ಮುಂದಿನ ಪೀಳಿಗೆಗೆ ಮಾದರಿ ಆಗಬೇಕು. ಇಂದಿನ ಮಕ್ಕಳಿಗೆ ಮನೆಯಲ್ಲಿ ಉತ್ತಮ ಸಂಸ್ಕಾರ ಸಿಗದ ಕಾರಣ ಮದುವೆಯಾದ ಕೆಲವೇ ದಿನಗಳಲ್ಲಿ ವಿಚ್ಛೇದನಗಳಾಗುತ್ತಿವೆ ಎಂದು ಹೇಳಿದರು.</p>.<p>ಒತ್ತಡದ ಜೀವನದಿಂದ ಮನುಷ್ಯ ಅನೇಕ ರೋಗಗಳಿಗೆ ಒಳಗಾಗುತ್ತಿದ್ದಾನೆ. ಒತ್ತಡ ಮುಕ್ತಿ ಹಾಗೂ ಸುಂದರ ಜೀವನಕ್ಕೆ ಪ್ರವಚನ, ಪುರಾಣಗಳನ್ನು ಆಲಿಸಬೇಕು. ತಂದೆ-ತಾಯಿ ಸೇವೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಡಾ. ಶ್ರೇಯಸ್ ಹೆಬ್ಬಾಳಕರ್ ಮಾತನಾಡಿದರು. ಇದಕ್ಕೂ ಮುನ್ನ ಬಸವಲಿಂಗ ಅವಧೂತರು ಸಾಯಿಬಾಬಾ ಅವರ ಮೂರ್ತಿಗೆ ಪೂಜೆ ಸಲ್ಲಿಸಿದರು.</p>.<p>ದೇವಸ್ಥಾನದ ದಿಲೀಪ್ ವಡಗಾವೆ, ಅಮರ ವಡಗಾವೆ, ಅನಿಲ್ ಕೋಟೆ, ಶಂಕರ ಸಿಂಧೆ, ಸಂತೋಷ್ ಸ್ವಾಮಿ, ಶಂಕ್ರಣ್ಣ ಕೊಳಾರ, ರಾಹುಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-33-320835437</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳಾರ(ಕೆ)(ಜನವಾಡ): ಪರಸ್ಪರ ಪ್ರೀತಿ, ವಿಶ್ವಾಸ, ಸೌಹಾರ್ದದ ಬದುಕಿಗಾಗಿ ಅವಿಭಕ್ತ ಕುಟುಂಬ ಸಂಸ್ಕೃತಿ ಬೆಳೆಯಬೇಕು ಎಂದು ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ಹೇಳಿದರು.</p>.<p>ಬೀದರ್ ತಾಲ್ಲೂಕಿನ ಕೊಳಾರ(ಕೆ) ಗ್ರಾಮದಲ್ಲಿ ಸಾಯಿ ಬಾಬಾ ಮಂದಿರದ ಜಾತ್ರೆ ಪ್ರಯುಕ್ತ ಮಂಗಳವಾರ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಅವಿಭಕ್ತ ಕುಟುಂಬದಲ್ಲಿ ಮಕ್ಕಳಿಗೆ ಹಿರಿಯರ ಪ್ರೀತಿ, ಮಾರ್ಗದರ್ಶನ ಸಿಗುತ್ತದೆ. ಹೀಗಾಗಿ ಒಟ್ಟಿಗೆ ಜೀವನ ಸಾಗಿಸಿ ಮುಂದಿನ ಪೀಳಿಗೆಗೆ ಮಾದರಿ ಆಗಬೇಕು. ಇಂದಿನ ಮಕ್ಕಳಿಗೆ ಮನೆಯಲ್ಲಿ ಉತ್ತಮ ಸಂಸ್ಕಾರ ಸಿಗದ ಕಾರಣ ಮದುವೆಯಾದ ಕೆಲವೇ ದಿನಗಳಲ್ಲಿ ವಿಚ್ಛೇದನಗಳಾಗುತ್ತಿವೆ ಎಂದು ಹೇಳಿದರು.</p>.<p>ಒತ್ತಡದ ಜೀವನದಿಂದ ಮನುಷ್ಯ ಅನೇಕ ರೋಗಗಳಿಗೆ ಒಳಗಾಗುತ್ತಿದ್ದಾನೆ. ಒತ್ತಡ ಮುಕ್ತಿ ಹಾಗೂ ಸುಂದರ ಜೀವನಕ್ಕೆ ಪ್ರವಚನ, ಪುರಾಣಗಳನ್ನು ಆಲಿಸಬೇಕು. ತಂದೆ-ತಾಯಿ ಸೇವೆ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಡಾ. ಶ್ರೇಯಸ್ ಹೆಬ್ಬಾಳಕರ್ ಮಾತನಾಡಿದರು. ಇದಕ್ಕೂ ಮುನ್ನ ಬಸವಲಿಂಗ ಅವಧೂತರು ಸಾಯಿಬಾಬಾ ಅವರ ಮೂರ್ತಿಗೆ ಪೂಜೆ ಸಲ್ಲಿಸಿದರು.</p>.<p>ದೇವಸ್ಥಾನದ ದಿಲೀಪ್ ವಡಗಾವೆ, ಅಮರ ವಡಗಾವೆ, ಅನಿಲ್ ಕೋಟೆ, ಶಂಕರ ಸಿಂಧೆ, ಸಂತೋಷ್ ಸ್ವಾಮಿ, ಶಂಕ್ರಣ್ಣ ಕೊಳಾರ, ರಾಹುಲ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-33-320835437</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>