<p><strong>ಹುಲಸೂರ</strong>: ಭಾಲ್ಕಿ ತಾಲ್ಲೂಕಿನ ಕೊಂಗಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹಾಳಾದ ಸೇತುವೆಯನ್ನು ತಾತ್ಕಾಲಿಕವಾಗಿ ದುರಸ್ತಿಮಾಡಿ ಲೋಕೋಪಯೋಗಿ ಅಧಿಕಾರಿಗಳು ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.</p>.<p>ಕೊಂಗಳಿ ಗ್ರಾಮದಿಂದ ಹುಲಸೂರು ಸೇರಿ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಚಿಕ್ಕದೊಂದು ಸೇತುವೆಯಿದ್ದು ಮಾಂಜ್ರಾ ನದಿಯಲ್ಲಿ ಪ್ರವಾಹ ಬಂದರೆ ಮುಳುಗುತ್ತದೆ. ಇದರಿಂದ ಕೊಂಗಳಿ ಸೇರಿ ವಿವಿಧ ಗ್ರಾಮಗಳಿಗೆ ಹೋಗಲು ಇರುವ ಏಕೈಕ ರಸ್ತೆ ಕಡಿತವಾಗಿತ್ತು.</p>.<p>ಈ ವಿಷಯಕ್ಕೆ ಸಂಬಂಧಿಸಿದಂತೆ ಜೂನ್ 14 ರ ಪ್ರಜಾವಾಣಿ ದಿನಪತ್ರಿಕೆಯಲ್ಲಿ ’ಮಳೆ ಬಂದರೆ ರಸ್ತೆ ಸಂಪರ್ಕ ಕಡಿತ' ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟಗೊಂಡಿತ್ತು.</p>.<p>ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೆ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿ ಹಾಳಾದ ಸೇತುವೆಗೆ ಮಣ್ಣು ಹಾಕುವ ಮೂಲಕ ವಾಹನಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ಭಾಲ್ಕಿ ತಾಲ್ಲೂಕಿನ ಕೊಂಗಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹಾಳಾದ ಸೇತುವೆಯನ್ನು ತಾತ್ಕಾಲಿಕವಾಗಿ ದುರಸ್ತಿಮಾಡಿ ಲೋಕೋಪಯೋಗಿ ಅಧಿಕಾರಿಗಳು ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.</p>.<p>ಕೊಂಗಳಿ ಗ್ರಾಮದಿಂದ ಹುಲಸೂರು ಸೇರಿ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಚಿಕ್ಕದೊಂದು ಸೇತುವೆಯಿದ್ದು ಮಾಂಜ್ರಾ ನದಿಯಲ್ಲಿ ಪ್ರವಾಹ ಬಂದರೆ ಮುಳುಗುತ್ತದೆ. ಇದರಿಂದ ಕೊಂಗಳಿ ಸೇರಿ ವಿವಿಧ ಗ್ರಾಮಗಳಿಗೆ ಹೋಗಲು ಇರುವ ಏಕೈಕ ರಸ್ತೆ ಕಡಿತವಾಗಿತ್ತು.</p>.<p>ಈ ವಿಷಯಕ್ಕೆ ಸಂಬಂಧಿಸಿದಂತೆ ಜೂನ್ 14 ರ ಪ್ರಜಾವಾಣಿ ದಿನಪತ್ರಿಕೆಯಲ್ಲಿ ’ಮಳೆ ಬಂದರೆ ರಸ್ತೆ ಸಂಪರ್ಕ ಕಡಿತ' ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟಗೊಂಡಿತ್ತು.</p>.<p>ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೆ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿ ಹಾಳಾದ ಸೇತುವೆಗೆ ಮಣ್ಣು ಹಾಕುವ ಮೂಲಕ ವಾಹನಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>