ಔರಾದ್: ತಾಲ್ಲೂಕಿನ ಕೌಡಗಾಂವ್ ಗ್ರಾಮದ ಬಳಿಯ ಮಲ್ಲಯ್ಯ ಮುತ್ಯಾ ಆಶ್ರಮದ ಲಕ್ಷ್ಮಿಬಾಯಿ (ಶರಣಮ್ಮ) ಕಲ್ಲಪ್ಪ ಜಾಬಶೆಟ್ಟಿ (35) ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ಆಶ್ರಮದ ಕೋಣೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂಬುದಾಗಿ ಡೆತ್ ನೋಟ್ ಬರೆದಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪಿಎಸ್ಐ ಸಿದ್ಧಲಿಂಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸಂತಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಲಕ್ಷ್ಮಿಬಾಯಿ ಅವರು ಬಾಲ ಸನ್ಯಾಸಿಯಾಗಿದ್ದು, 11 ವರ್ಷಗಳಿಂದ ಆಶ್ರಮದಲ್ಲಿ ಇದ್ದಾರೆ. ಇವರ ಆತ್ಮಹತ್ನೆ ನಮಗೆ ಅತೀವ ದುಃಖ ತಂದಿದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಕೌಡಗಾಂವ್ ಗ್ರಾಮಸ್ಥರು ಆಗ್ರಹಿಸಿದ್ದಾರೆ.