ಅರ್ಹ ಪ್ರತಿಯೊಬ್ಬರಿಗೂ ಕೋವಿಡ್ ಸೋಂಕು ಪ್ರತಿಬಂಧಕ ಲಸಿಕೆ ಕೊಡುವುದು ಜಿಲ್ಲಾ ಆಡಳಿತದ ಉದ್ದೇಶವಾಗಿದೆ. ಹೊಟೇಲ್, ಅಂಗಡಿ ಸೇರಿದಂತೆ ಪ್ರತಿ ನಿತ್ಯ ಜನಸಂದಣಿ ಮಧ್ಯೆ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಪರಿಶೀಲನೆ ವೇಳೆ ಯಾರಾದರೂ ಲಸಿಕೆ ಪಡೆಯದೇ ಇರುವುದು ಕಂಡು ಬಂದರೆ ಅಂಗಡಿಗಳ ಮಾಲೀಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.