ಇದಕ್ಕೂ ಮುನ್ನ ಶಿವಯ್ಯ ಸ್ವಾಮಿ ಅವರು, ಸ್ವಚ್ಛ ಬೀದರ್ ಜಿಲ್ಲೆ ಅಭಿಯಾನದ ಪ್ರಯುಕ್ತ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ವಿವಿಧ ಚಟುವಟಿಕೆಗಳ ಮಾಹಿತಿ ನೀಡಿದರು. ಅಭಿಯಾನಕ್ಕೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಸಂಘ ಸಂಸ್ಥೆಗಳು ಹಾಗೂ ಸಮುದಾಯದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.