<p><strong>ಔರಾದ್: </strong>‘ಕಾರ್ಮಿಕರಿಗೆ ನೆರವು ನೀಡಬೇಕು’ ಎಂದು ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಸಂಘ ಆಗ್ರಹಿಸಿದೆ.</p>.<p>ಸಂಘದ ಪ್ರಮುಖ ಪ್ರವೀಣ ಕಾರಂಜೆ, ಸಂತೋಷ ಸಿಂಧೆ ಹಾಗೂ ಪ್ರಭುರಾವ ಬಾಚೆಪಳ್ಳಿ ನೇತೃತ್ವದಲ್ಲಿ ಕಾರ್ಮಿಕರು ಇಲ್ಲಿಯ ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಉಪ ತಹಶೀಲ್ದಾರ್ ಅಶೋಕಕುಮಾರ ಅವರಿಗೆ ಮನವಿಪತ್ರ ಸಲ್ಲಿಸಿದರು.</p>.<p>‘ಸರ್ಕಾರ ಕಾರ್ಮಿಕರ ನೋಂದಣಿ ಮಾಡಿಸಲು ಸ್ವಯಂ ದೃಢೀಕರಣ ವ್ಯವಸ್ಥೆ ತಂದಿದೆ. ಆದ್ದರಿಂದ ಅರ್ಹರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ದೂರಿದರು.</p>.<p>ಗುತ್ತಿಗೆದಾರರು, ನಗರಸಭೆ ಹಾಗೂ ಪಟ್ಟಣ ಪಂಚಾಯಿತಿಯಿಂದ ಪರವಾನಗಿ ಪಡೆದ ಕಾರ್ಮಿಕರನ್ನು ಮಾತ್ರ ಅಧಿಕೃತ ಎಂದು ಪರಿಗಣಿಸಬೇಕು. ಔರಾದ್ ತಾಲ್ಲೂಕು ಸೇರಿದಂತೆ ವಿವಿಧೆಡೆ ನಕಲಿ ಕಾರ್ಮಿಕರ ನೋಂದಣಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಕಾರ್ಮಿಕರಿಗೆ ವಿಮೆ, ಅವರ ಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ಸರ್ಕಾಎ ವಿವಿಧ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ಕಾರ್ಮಿಕ ಸಂಘದ ಮೊಗಲಪ್ಪ ಬಳತೆ, ಯಶವಂತ ಕಾಂಬಳೆ, ಗಣಪತರಾವ ಸಾದುರೆ, ರಾಮ ರಾಠೋಡ, ಚಂದ್ರಕಾಂತ ಕಾಂಬಳೆ ಹಾಗೂ ಅನಿಲ ಭುಜಂಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್: </strong>‘ಕಾರ್ಮಿಕರಿಗೆ ನೆರವು ನೀಡಬೇಕು’ ಎಂದು ಕಲ್ಯಾಣ ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಸಂಘ ಆಗ್ರಹಿಸಿದೆ.</p>.<p>ಸಂಘದ ಪ್ರಮುಖ ಪ್ರವೀಣ ಕಾರಂಜೆ, ಸಂತೋಷ ಸಿಂಧೆ ಹಾಗೂ ಪ್ರಭುರಾವ ಬಾಚೆಪಳ್ಳಿ ನೇತೃತ್ವದಲ್ಲಿ ಕಾರ್ಮಿಕರು ಇಲ್ಲಿಯ ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಉಪ ತಹಶೀಲ್ದಾರ್ ಅಶೋಕಕುಮಾರ ಅವರಿಗೆ ಮನವಿಪತ್ರ ಸಲ್ಲಿಸಿದರು.</p>.<p>‘ಸರ್ಕಾರ ಕಾರ್ಮಿಕರ ನೋಂದಣಿ ಮಾಡಿಸಲು ಸ್ವಯಂ ದೃಢೀಕರಣ ವ್ಯವಸ್ಥೆ ತಂದಿದೆ. ಆದ್ದರಿಂದ ಅರ್ಹರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ದೂರಿದರು.</p>.<p>ಗುತ್ತಿಗೆದಾರರು, ನಗರಸಭೆ ಹಾಗೂ ಪಟ್ಟಣ ಪಂಚಾಯಿತಿಯಿಂದ ಪರವಾನಗಿ ಪಡೆದ ಕಾರ್ಮಿಕರನ್ನು ಮಾತ್ರ ಅಧಿಕೃತ ಎಂದು ಪರಿಗಣಿಸಬೇಕು. ಔರಾದ್ ತಾಲ್ಲೂಕು ಸೇರಿದಂತೆ ವಿವಿಧೆಡೆ ನಕಲಿ ಕಾರ್ಮಿಕರ ನೋಂದಣಿ ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಕಾರ್ಮಿಕರಿಗೆ ವಿಮೆ, ಅವರ ಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ಸರ್ಕಾಎ ವಿವಿಧ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.</p>.<p>ಕಾರ್ಮಿಕ ಸಂಘದ ಮೊಗಲಪ್ಪ ಬಳತೆ, ಯಶವಂತ ಕಾಂಬಳೆ, ಗಣಪತರಾವ ಸಾದುರೆ, ರಾಮ ರಾಠೋಡ, ಚಂದ್ರಕಾಂತ ಕಾಂಬಳೆ ಹಾಗೂ ಅನಿಲ ಭುಜಂಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>