<p><strong>ಹುಲಸೂರ:</strong> ತಾಲ್ಲೂಕಿನ ಮಿರಖಲ ಗ್ರಾಮಸ್ಥರು ಹತ್ತು ಹಲವು ಸಮಸ್ಯೆಗಳ ನಡುವೆ ಬದುಕು ಸಾಗಿಸುತ್ತಿದ್ದಾರೆ.</p>.<p>ಸಮರ್ಪಕ ರಸ್ತೆಗಳಿಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಗ್ರಾಮದ ಕೆಲ ಭಾಗಗಳಲ್ಲಿ ನಾಲ್ಕು ಚಕ್ರದ ವಾಹನಗಳು ಸಂಚರಿಸಲು ಸಾಧ್ಯವಿಲ್ಲದಂಥ ಸ್ಥಿತಿಯಿದೆ. ಇದರಿಂದಾಗಿ ಹೆರಿಗೆ, ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ.</p>.<p>ಗ್ರಾಮದ ಮುಖ್ಯ ರಸ್ತೆಗಳು ಹಾಗೂ ಒಳ ರಸ್ತೆಗಳು ತುಂಬಾ ಇಕ್ಕಟ್ಟಾಗಿವೆ. ಗ್ರಾಮ ಪಂಚಾಯಿತಿಯವರು ರಸ್ತೆ ಬದಿಗಳಲ್ಲಿ ಚರಂಡಿ ನಿರ್ಮಿಸದೆ ಇರುವುದರಿಂದ ರಸ್ತೆಗಳ ಮೇಲೆ ಗಲೀಜು ನೀರು ಹಾಗೂ ಮಳೆ ನೀರು ಹರಿಯುತ್ತದೆ. </p>.<p>ಅಲ್ಲಲ್ಲಿ ಚರಂಡಿ ಇದ್ದರೂ, ಹೂಳು ತುಂಬಿದೆ. ನೀರು ಸರಾಗವಾಗಿ ಹರಿದೇ ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುವ ಲಕ್ಷಣಗಳು ಹೆಚ್ಚಾಗಿವೆ. ದುರ್ವಾಸನೆಯೂ ಹೆಚ್ಚಾಗಿದೆ.</p>.<p>ಜೋರು ಮಳೆಯಾದಾಗ ಚರಂಡಿ ನೀರು ರಸ್ತೆ ಮೇಲೆಯೇ ಹರಿಯುತ್ತದೆ. ಇದರಿಂದ ರಸ್ತೆಗಳು ಹಾಳಾಗಿ ತಗ್ಗು–ಗುಂಡಿಗಳು ಬಿದ್ದಿವೆ. ಮಕ್ಕಳು, ವೃದ್ಧರು ಮತ್ತು ಮಹಿಳೆಯರು ಸಂಚರಿಸಲೂ ಭಯಪಡುವಂಥ ಸ್ಥಿತಿ ಇದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p>ಗ್ರಾಮದಲ್ಲಿ ಬಹುತೇಕ ವಿದ್ಯುತ್ ಕಂಬಗಳಿಗೆ ಬೀದಿ ದೀಪಗಳಿಲ್ಲ. ರಾತ್ರಿ ಸಮಯದಲ್ಲಿ ಒಬ್ಬಂಟಿಯಾಗಿ ಸಂಚರಿಸಲು ಹಿಂದೇಟು ಹಾಕುವಂತಾಗಿದೆ. ಮಳೆಗಾಲದ ಸಮಯ ಆಗಿರುವುದರಿಂದ ಕೆಸರು, ವಿಷಜಂತುಗಳ ಭಯ ಕಾಡುತ್ತಿದೆ. </p>.<p>ಗ್ರಾಮದಲ್ಲಿ ಒಂದು ಅಂಗನವಾಡಿ ಕೇಂದ್ರವಿದ್ದು, ಅಂಗನವಾಡಿ ಕೇಂದ್ರದ ಅಕ್ಕಪಕ್ಕದಲ್ಲಿ ಗಲೀಜು ನೀರು ಹರಿಯುತ್ತದೆ. ಅಂಥ ಪ್ರದೇಶದಲ್ಲೇ ಮಕ್ಕಳ ಅಕ್ಷರಾಭ್ಯಾಸ ನಡೆಯುತ್ತಿದ್ದು, ಊಟ, ಉಪಾಹಾರ ಸೇವಿಸಬೇಕಿದೆ. </p>.<p>ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಗಳು ಸಮಯಕ್ಕೆ ಸರಿಯಾಗಿ ಬರುವುದಿಲ್ಲ. ಅವುಗಳನ್ನು ಹೊರತುಪಡಿಸಿ ಯಾವ ವಾಹನ ಸೌಲಭ್ಯವೂ ಇಲ್ಲ. ಅಗತ್ಯ ಹಾಗೂ ತುರ್ತು ಸಂದರ್ಭಗಳಲ್ಲಿ ಗ್ರಾಮಸ್ಥರು ಬೇರೆ ಊರಿಗೆ ತೆರಳಬೇಕಾದರೆ ಪಕ್ಕದಲ್ಲಿರುವ ಹುಲಸೂರ ಪಟ್ಟಣಕ್ಕೆ ಬರಬೇಕು.</p>.<p>ಗ್ರಾಮದಲ್ಲಿ ತೀರಾ ಹಳೆಯದಾದ ಹಾಗೂ ಈಗ ಸಂಪೂರ್ಣವಾಗಿ ಹಾಳಾಗಿರುವ ಪಶು ಆಸ್ಪತ್ರೆಯ ಕಟ್ಟಡವಿದೆ. ಅಲ್ಲಿ ವೈದ್ಯರು ಸೇರಿದಂತೆ ಯಾವ ಸೌಲಭ್ಯ, ಸಿಬ್ಬಂದಿಯೂ ಇಲ್ಲ. ಗ್ರಾಮಕ್ಕೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಅಗತ್ಯವಿದ್ದು, ಗ್ರಾಮಸ್ಥರು ಅದಕ್ಕಾಗಿ ಕಾಯುತ್ತಿದ್ದಾರೆ.</p>.<p>ಈ ಕುರಿತು ಅಭಿಪ್ರಾಯ ಪಡೆಯಲು ಪಿಡಿಒ ಅವರಿಗೆ ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಲಿಲ್ಲ.</p>.<div><blockquote>ಚರಂಡಿ ನೀರು ನಿಂತಲ್ಲಿಯೇ ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಸಾಂಕ್ರಾಮಿಕ ರೋಗ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ. ಪಂಚಾಯಿತಿಯವರು ಗ್ರಾಮದ ಅಭಿವೃದ್ಧಿ ಕಡೆಗೆ ಗಮನ ಹರಿಸಬೇಕು </blockquote><span class="attribution">ಗಣೇಶ ಪಾಟೀಲ ಮಿರಖಲ ಗ್ರಾಮಸ್ಥ</span></div>.<div><blockquote>ಮಿರಖಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಂದಿಗೆ ಚರ್ಚಿಸಿ ಗ್ರಾಮದ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಮಹದೇವ ಜಮ್ಮು ತಾಲ್ಲೂಕು ಪಂಚಾಯಿತಿ ಇಒ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ:</strong> ತಾಲ್ಲೂಕಿನ ಮಿರಖಲ ಗ್ರಾಮಸ್ಥರು ಹತ್ತು ಹಲವು ಸಮಸ್ಯೆಗಳ ನಡುವೆ ಬದುಕು ಸಾಗಿಸುತ್ತಿದ್ದಾರೆ.</p>.<p>ಸಮರ್ಪಕ ರಸ್ತೆಗಳಿಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಗ್ರಾಮದ ಕೆಲ ಭಾಗಗಳಲ್ಲಿ ನಾಲ್ಕು ಚಕ್ರದ ವಾಹನಗಳು ಸಂಚರಿಸಲು ಸಾಧ್ಯವಿಲ್ಲದಂಥ ಸ್ಥಿತಿಯಿದೆ. ಇದರಿಂದಾಗಿ ಹೆರಿಗೆ, ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ.</p>.<p>ಗ್ರಾಮದ ಮುಖ್ಯ ರಸ್ತೆಗಳು ಹಾಗೂ ಒಳ ರಸ್ತೆಗಳು ತುಂಬಾ ಇಕ್ಕಟ್ಟಾಗಿವೆ. ಗ್ರಾಮ ಪಂಚಾಯಿತಿಯವರು ರಸ್ತೆ ಬದಿಗಳಲ್ಲಿ ಚರಂಡಿ ನಿರ್ಮಿಸದೆ ಇರುವುದರಿಂದ ರಸ್ತೆಗಳ ಮೇಲೆ ಗಲೀಜು ನೀರು ಹಾಗೂ ಮಳೆ ನೀರು ಹರಿಯುತ್ತದೆ. </p>.<p>ಅಲ್ಲಲ್ಲಿ ಚರಂಡಿ ಇದ್ದರೂ, ಹೂಳು ತುಂಬಿದೆ. ನೀರು ಸರಾಗವಾಗಿ ಹರಿದೇ ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುವ ಲಕ್ಷಣಗಳು ಹೆಚ್ಚಾಗಿವೆ. ದುರ್ವಾಸನೆಯೂ ಹೆಚ್ಚಾಗಿದೆ.</p>.<p>ಜೋರು ಮಳೆಯಾದಾಗ ಚರಂಡಿ ನೀರು ರಸ್ತೆ ಮೇಲೆಯೇ ಹರಿಯುತ್ತದೆ. ಇದರಿಂದ ರಸ್ತೆಗಳು ಹಾಳಾಗಿ ತಗ್ಗು–ಗುಂಡಿಗಳು ಬಿದ್ದಿವೆ. ಮಕ್ಕಳು, ವೃದ್ಧರು ಮತ್ತು ಮಹಿಳೆಯರು ಸಂಚರಿಸಲೂ ಭಯಪಡುವಂಥ ಸ್ಥಿತಿ ಇದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p>ಗ್ರಾಮದಲ್ಲಿ ಬಹುತೇಕ ವಿದ್ಯುತ್ ಕಂಬಗಳಿಗೆ ಬೀದಿ ದೀಪಗಳಿಲ್ಲ. ರಾತ್ರಿ ಸಮಯದಲ್ಲಿ ಒಬ್ಬಂಟಿಯಾಗಿ ಸಂಚರಿಸಲು ಹಿಂದೇಟು ಹಾಕುವಂತಾಗಿದೆ. ಮಳೆಗಾಲದ ಸಮಯ ಆಗಿರುವುದರಿಂದ ಕೆಸರು, ವಿಷಜಂತುಗಳ ಭಯ ಕಾಡುತ್ತಿದೆ. </p>.<p>ಗ್ರಾಮದಲ್ಲಿ ಒಂದು ಅಂಗನವಾಡಿ ಕೇಂದ್ರವಿದ್ದು, ಅಂಗನವಾಡಿ ಕೇಂದ್ರದ ಅಕ್ಕಪಕ್ಕದಲ್ಲಿ ಗಲೀಜು ನೀರು ಹರಿಯುತ್ತದೆ. ಅಂಥ ಪ್ರದೇಶದಲ್ಲೇ ಮಕ್ಕಳ ಅಕ್ಷರಾಭ್ಯಾಸ ನಡೆಯುತ್ತಿದ್ದು, ಊಟ, ಉಪಾಹಾರ ಸೇವಿಸಬೇಕಿದೆ. </p>.<p>ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಗಳು ಸಮಯಕ್ಕೆ ಸರಿಯಾಗಿ ಬರುವುದಿಲ್ಲ. ಅವುಗಳನ್ನು ಹೊರತುಪಡಿಸಿ ಯಾವ ವಾಹನ ಸೌಲಭ್ಯವೂ ಇಲ್ಲ. ಅಗತ್ಯ ಹಾಗೂ ತುರ್ತು ಸಂದರ್ಭಗಳಲ್ಲಿ ಗ್ರಾಮಸ್ಥರು ಬೇರೆ ಊರಿಗೆ ತೆರಳಬೇಕಾದರೆ ಪಕ್ಕದಲ್ಲಿರುವ ಹುಲಸೂರ ಪಟ್ಟಣಕ್ಕೆ ಬರಬೇಕು.</p>.<p>ಗ್ರಾಮದಲ್ಲಿ ತೀರಾ ಹಳೆಯದಾದ ಹಾಗೂ ಈಗ ಸಂಪೂರ್ಣವಾಗಿ ಹಾಳಾಗಿರುವ ಪಶು ಆಸ್ಪತ್ರೆಯ ಕಟ್ಟಡವಿದೆ. ಅಲ್ಲಿ ವೈದ್ಯರು ಸೇರಿದಂತೆ ಯಾವ ಸೌಲಭ್ಯ, ಸಿಬ್ಬಂದಿಯೂ ಇಲ್ಲ. ಗ್ರಾಮಕ್ಕೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಅಗತ್ಯವಿದ್ದು, ಗ್ರಾಮಸ್ಥರು ಅದಕ್ಕಾಗಿ ಕಾಯುತ್ತಿದ್ದಾರೆ.</p>.<p>ಈ ಕುರಿತು ಅಭಿಪ್ರಾಯ ಪಡೆಯಲು ಪಿಡಿಒ ಅವರಿಗೆ ಹಲವು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಲಿಲ್ಲ.</p>.<div><blockquote>ಚರಂಡಿ ನೀರು ನಿಂತಲ್ಲಿಯೇ ನಿಂತು ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಸಾಂಕ್ರಾಮಿಕ ರೋಗ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ. ಪಂಚಾಯಿತಿಯವರು ಗ್ರಾಮದ ಅಭಿವೃದ್ಧಿ ಕಡೆಗೆ ಗಮನ ಹರಿಸಬೇಕು </blockquote><span class="attribution">ಗಣೇಶ ಪಾಟೀಲ ಮಿರಖಲ ಗ್ರಾಮಸ್ಥ</span></div>.<div><blockquote>ಮಿರಖಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಂದಿಗೆ ಚರ್ಚಿಸಿ ಗ್ರಾಮದ ಸಮಸ್ಯೆಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಮಹದೇವ ಜಮ್ಮು ತಾಲ್ಲೂಕು ಪಂಚಾಯಿತಿ ಇಒ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>