ಮೂರು ದಿನಗಳ ವರೆಗೆ ದೇಗುಲದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ನ.25ರಂದು ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ದೇಗುಲದಲ್ಲಿ ಚಂಡಿಕಾ ಹೋಮ, ಮಧ್ಯಾಹ್ನ ಗೋಪುರಕ್ಕೆ ಕಳಸಾರೋಹಣ ನೆರವೇರಲಿದೆ. ಸಂಜೆ ವಿವಿಧ ಸಂಗೀತ ಕಲಾವಿದರಿಂದ ಪುರಾಣ ಪ್ರವಚನ, ಸಂಗೀತ ಭಜನಾ ಕಾರ್ಯಕ್ರಮಗಳು ನಡೆಯಲಿವೆ.