<p><strong>ಬೀದರ್</strong>: ಕರ್ನಾಟಕದ ರಾಜ್ಯೋತ್ಸವದ ಪ್ರಯುಕ್ತ ದಕ್ಷಿಣ ಕರಾವಳಿ ಕನ್ನಡ ಸಂಘದ ವತಿಯಿಂದ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರ ರಂಗ ಮಂದಿರದಲ್ಲಿ ‘ನಗೆಹಬ್ಬ’ ಕಾರ್ಯಕ್ರಮ ನಡೆಯಿತು.</p>.<p>ಹಾಸ್ಯ ಕಲಾವಿದ ವಿಠ್ಠಲ ನಾಯಕ್ ಕಲಡ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ‘ಮಕ್ಕಳು ಹೆತ್ತ ತಂದೆ-ತಾಯಿಗೆ, ಹೊತ್ತ ಭಾರತ ಮಾತೆಗೆ ಎಂದಿಗೂ ದ್ರೋಹ ಬಗೆಯಬಾರದು’ ಎಂದು ಹೇಳಿದರು.</p>.<p>‘ಪಾಲಕರು ಮಕ್ಕಳ ಮೇಲೆ ಯಾವುದೇ ರೀತಿಯ ಒತ್ತಡ ಹಾಕದೆ 6 ರಿಂದ 16 ವರ್ಷದ ವರೆಗೆ ಅವರ ಸರಿ ತಪ್ಪುಗಳನ್ನು ತಿಳಿಸಬೇಕು. ಸರಿ ದಾರಿಯಲ್ಲಿ ಸಾಗುವಂತೆ ಮಾರ್ಗದರ್ಶನ ನೀಡಬೇಕು’ ಎಂದು ತಿಳಿಸಿದರು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿ, ‘ದಕ್ಷಿಣ ಕನ್ನಡ ಕರಾವಳಿ ಸಂಘದವರು ಕಳೆದ 24 ವರ್ಷಗಳಿಂದ ಬೀದರ್ನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಂಸ್ಕೃತಿಕ ವಾತಾವರಣ ಸೃಷ್ಟಿಸಿದ್ದಾರೆ‘ ಎಂದು ಬಣ್ಣಿಸಿದರು.</p>.<p>ತೇಜಸ್ ಕಲ್ಲುಗುಂಡಿ ಗಾಯನಕ್ಕೆ ರವಿರಾಜ ಒಡಿಯೂರು ಹಾರ್ಮೋನಿಯಂ, ಶರತ್ ಪೆರ್ಲಾ ತಬಲಾ ಸಾಥ್ ನೀಡಿದರು.</p>.<p>ಸಂಘದ ಅಧ್ಯಕ್ಷ ಪಿ.ಎನ್. ದಿವಾಕರ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಎ.ಎಸ್. ಪ್ರಭಾಕರ ದಯಾನಂದ ಶೆಟ್ಟಿ, ಗುರುಮೂರ್ತಿ, ರಾಜೇಶ ರಾವ್ ಇದ್ದರು. ರಘುರಾಮ ಉಪಾಧ್ಯಾಯ ಸ್ವಾಗತಿಸಿದರು.</p>.<p>ಕೆ. ಸತ್ಯಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ಅಡಿಗ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಕರ್ನಾಟಕದ ರಾಜ್ಯೋತ್ಸವದ ಪ್ರಯುಕ್ತ ದಕ್ಷಿಣ ಕರಾವಳಿ ಕನ್ನಡ ಸಂಘದ ವತಿಯಿಂದ ಇಲ್ಲಿಯ ಪೂಜ್ಯ ಚನ್ನಬಸವ ಪಟ್ಟದ್ದೇವರ ರಂಗ ಮಂದಿರದಲ್ಲಿ ‘ನಗೆಹಬ್ಬ’ ಕಾರ್ಯಕ್ರಮ ನಡೆಯಿತು.</p>.<p>ಹಾಸ್ಯ ಕಲಾವಿದ ವಿಠ್ಠಲ ನಾಯಕ್ ಕಲಡ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ‘ಮಕ್ಕಳು ಹೆತ್ತ ತಂದೆ-ತಾಯಿಗೆ, ಹೊತ್ತ ಭಾರತ ಮಾತೆಗೆ ಎಂದಿಗೂ ದ್ರೋಹ ಬಗೆಯಬಾರದು’ ಎಂದು ಹೇಳಿದರು.</p>.<p>‘ಪಾಲಕರು ಮಕ್ಕಳ ಮೇಲೆ ಯಾವುದೇ ರೀತಿಯ ಒತ್ತಡ ಹಾಕದೆ 6 ರಿಂದ 16 ವರ್ಷದ ವರೆಗೆ ಅವರ ಸರಿ ತಪ್ಪುಗಳನ್ನು ತಿಳಿಸಬೇಕು. ಸರಿ ದಾರಿಯಲ್ಲಿ ಸಾಗುವಂತೆ ಮಾರ್ಗದರ್ಶನ ನೀಡಬೇಕು’ ಎಂದು ತಿಳಿಸಿದರು.</p>.<p>ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ಮಾತನಾಡಿ, ‘ದಕ್ಷಿಣ ಕನ್ನಡ ಕರಾವಳಿ ಸಂಘದವರು ಕಳೆದ 24 ವರ್ಷಗಳಿಂದ ಬೀದರ್ನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಾಂಸ್ಕೃತಿಕ ವಾತಾವರಣ ಸೃಷ್ಟಿಸಿದ್ದಾರೆ‘ ಎಂದು ಬಣ್ಣಿಸಿದರು.</p>.<p>ತೇಜಸ್ ಕಲ್ಲುಗುಂಡಿ ಗಾಯನಕ್ಕೆ ರವಿರಾಜ ಒಡಿಯೂರು ಹಾರ್ಮೋನಿಯಂ, ಶರತ್ ಪೆರ್ಲಾ ತಬಲಾ ಸಾಥ್ ನೀಡಿದರು.</p>.<p>ಸಂಘದ ಅಧ್ಯಕ್ಷ ಪಿ.ಎನ್. ದಿವಾಕರ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾರ್ಯದರ್ಶಿ ಎ.ಎಸ್. ಪ್ರಭಾಕರ ದಯಾನಂದ ಶೆಟ್ಟಿ, ಗುರುಮೂರ್ತಿ, ರಾಜೇಶ ರಾವ್ ಇದ್ದರು. ರಘುರಾಮ ಉಪಾಧ್ಯಾಯ ಸ್ವಾಗತಿಸಿದರು.</p>.<p>ಕೆ. ಸತ್ಯಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ಅಡಿಗ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>