<p><strong>ಔರಾದ್(ಎಸ್) (ಜನವಾಡ):</strong> ಬೀದರ್ ತಾಲ್ಲೂಕಿನ ಔರಾದ್(ಎಸ್) ಗ್ರಾಮದಲ್ಲಿ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಸೋಮವಾರ ಚಾಲನೆ ನೀಡಿದರು.</p>.<p>ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು.</p>.<p>ಅರ್ಜಿ ಸಲ್ಲಿಸದಿದ್ದರೂ, ಗ್ರಾಮಗಳ ಎಲ್ಲ ಆಸ್ತಿಗಳ ಭೂ ಮಾಪನ ಮಾಡಿ ಪೋಡಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ಗ್ರಾಮಕ್ಕೆ ನಾಲ್ವರು ಭೂ ಮಾಪಕರನ್ನು ನಿಯೋಜಿಸಲಾಗಿದೆ. ಭೂ ದಾಖಲೆಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.</p>.<p>ಸಾರ್ವಜನಿಕರು ಅಭಿಯಾನದ ಪ್ರಯೋಜನ ಪಡೆದು ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಎನ್.ಬಿ.ರೆಡ್ಡಿ ಗುರೂಜಿ, ತಹಶೀಲ್ದಾರ್ ಡಿ.ಜಿ.ಮಹಾತ್, ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟರೆಡ್ಡಿ ಪೋಗಲ್, ಪ್ರಮುಖರಾದ ಗುರುನಾಥ ರಾಜಗೀರಾ, ರಾಜರೆಡ್ಡಿ ಶಹಾಬಾದ್, ಸುರೇಶ ಮಾಶೆಟ್ಟಿ, ಸೂರ್ಯಕಾಂತ ಸೇಡಂ ಹಾಗೂ ನರಸಿಂಹರೆಡ್ಡಿ ಗಂಗ್ವಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್(ಎಸ್) (ಜನವಾಡ):</strong> ಬೀದರ್ ತಾಲ್ಲೂಕಿನ ಔರಾದ್(ಎಸ್) ಗ್ರಾಮದಲ್ಲಿ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಸೋಮವಾರ ಚಾಲನೆ ನೀಡಿದರು.</p>.<p>ಗ್ರಾಮೀಣ ಭಾಗದಲ್ಲಿ ದಶಕದಿಂದ ನನೆಗುದಿಗೆ ಬಿದ್ದಿರುವ ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ಅಭಿಯಾನ ಆರಂಭಿಸಲಾಗಿದೆ ಎಂದು ತಿಳಿಸಿದರು.</p>.<p>ಅರ್ಜಿ ಸಲ್ಲಿಸದಿದ್ದರೂ, ಗ್ರಾಮಗಳ ಎಲ್ಲ ಆಸ್ತಿಗಳ ಭೂ ಮಾಪನ ಮಾಡಿ ಪೋಡಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರತಿ ಗ್ರಾಮಕ್ಕೆ ನಾಲ್ವರು ಭೂ ಮಾಪಕರನ್ನು ನಿಯೋಜಿಸಲಾಗಿದೆ. ಭೂ ದಾಖಲೆಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.</p>.<p>ಸಾರ್ವಜನಿಕರು ಅಭಿಯಾನದ ಪ್ರಯೋಜನ ಪಡೆದು ಜಮೀನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಎನ್.ಬಿ.ರೆಡ್ಡಿ ಗುರೂಜಿ, ತಹಶೀಲ್ದಾರ್ ಡಿ.ಜಿ.ಮಹಾತ್, ಗ್ರಾಮ ಪಂಚಾಯಿತಿ ಅಧ್ಯಕ್ಷ ವೆಂಕಟರೆಡ್ಡಿ ಪೋಗಲ್, ಪ್ರಮುಖರಾದ ಗುರುನಾಥ ರಾಜಗೀರಾ, ರಾಜರೆಡ್ಡಿ ಶಹಾಬಾದ್, ಸುರೇಶ ಮಾಶೆಟ್ಟಿ, ಸೂರ್ಯಕಾಂತ ಸೇಡಂ ಹಾಗೂ ನರಸಿಂಹರೆಡ್ಡಿ ಗಂಗ್ವಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>